24.1 C
ಪುತ್ತೂರು, ಬೆಳ್ತಂಗಡಿ
September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ

ಅಮಾನುಷ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ, ಶಿಬಾಜೆ ಗ್ರಾಮ ಮತ್ತು ರಾಜ್ಯಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರ್ಮಸ್ಥಳದ ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ಜ.23 ರಂದು ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ, ಮಾತನಾಡಿ, ದಲಿತ ಮೇಲೆ ದೌರ್ಜನ್ಯ ಒಂದು ಜಿಲ್ಲೆಯ ಸಮಸ್ಯೆಯಲ್ಲ, ಇಡೀ ರಾಜ್ಯದಲ್ಲಿ ದಲಿತರನ್ನು ದಮನಿಸುವ ಕಾರ್ಯ ಇಂದು ನಡೆಯುತ್ತಿದೆ. ನಮಗೆ ರಕ್ಷಣೆ ನೀಡಿ, ಜನಸ್ನೇಹಿಯಾಗಬೇಕಾಗಿದ್ದ ಪೊಲೀಸರು, ದಲಿತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್,
ದ.ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನೇಮಿರಾಜ ಕಿಲ್ಲೂರು, ಶೇಖರ ಕುಕ್ಕೇಡಿ, ರಮೇಶ್. ಆರ್, ತಾಲೂಕು ಮೋಗೇರ ಸಂಘದ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ಸೇಸಪ್ಪ ಬೆದ್ರಕಾಡು, ಆನಂದ ಮಂಗಳೂರು, ವಸಂತ ಕುಬಲಾಡಿ, ಮೋನಪ್ಪ ಚಿಕ್ಕಮಗಳೂರು, ಪ್ರಭಾಕರ ನಲ್ಕೆ, ಗಿರೀಶ್ ಉಳ್ಳಾಲ, ಮೋನಪ್ಪ ಮೂಡಿಗೆರೆ, ಶೇಖರ್. ಎಲ್, ಬೇಬಿ ಸುವರ್ಣ, ಲೋಕೇಶ್ ಪಡುಬಿದ್ರೆ, ರವಿ ಮೂಡಿಗೆರೆ ಹಾಗೂ ಡಿಎಸ್‌ಎಸ್ ತಾಲೂಕಿನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಕಾರ್ಮಿಕ ಮುಖಂಡ ಬಿ.ಎಂ ಭಟ್, ಎಲ್. ಮಂಜುನಾಥ್ ಆಗಮಿಸಿ ಬೆಂಬಲ ಸೂಚಿಸಿದರು. ಪ್ರತಿಭಟನೆಗೆ ಮೊದಲು ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ದೈವ, ಶ್ರೀ ಕೊಡಮಣಿತ್ತಾಯ, ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ- ಶ್ರೀ ಬ್ರಹ್ಮ ಬೈದರ್ಕಳ ಗರಡಿ ಪೊಸರಡ್ಕ ಕ್ಷೇತ್ರದ ಬ್ರಹ್ಮಕುಂಭಾಭಿಷೇಕ: ಉಮಾಮಹೇಶ್ವರ ದೇವಸ್ಥಾನದಿಂದ ಪೊಸರಡ್ಕ ಕ್ಷೇತ್ರಕ್ಕೆ ಭವ್ಯ ಶೋಭಾಯಾತ್ರೆ

Suddi Udaya

ಸೌಜನ್ಯ ತಾಯಿ ಕುಸುಮಾವತಿ ವಿರುದ್ಧ ಎಸ್‌ಐಟಿಗೆ ದೂರು

Suddi Udaya

ಪಾರ್ಶ್ವ ವಾಯು ಸಮಸ್ಯೆಯಿಂದ ಬಳಲುತ್ತಿರುವ ಮಡಂತ್ಯಾರಿನ ಉಮೇಶ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ತಂಡದವರಿಂದ ಎರಡು ಕುಟುಂಬಕ್ಕೆ ಸಹಾಯಹಸ್ತ

Suddi Udaya

ಸೇವಾಭಾರತಿಗೆ 21ರ ಸಂಭ್ರಮ: ಡಿ.4 ನೂತನ ಕಾರ್ಯಾಲಯ ಸೇವಾನಿಕೇತನ ಉದ್ಘಾಟನಾ ಸಮಾರಂಭ

Suddi Udaya
error: Content is protected !!