22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಿಬಾಜೆಯ ದಲಿತ ಯುವಕ ಶ್ರೀಧರ್ ಸಾವಿನ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿ ಡಿ.ಎಸ್.ಎಸ್‌ನಿಂದ ಧರ್ಮಸ್ಥಳ ಪೊಲೀಸ್ ಠಾಣೆಯ ಎದುರು ಪ್ರತಿಭಟನೆ

ಬೆಳ್ತಂಗಡಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ತಾಲೂಕು ಶಾಖೆ ಬೆಳ್ತಂಗಡಿ ಮತ್ತು ದ.ಕ. ಜಿಲ್ಲೆಯ ಸಮಸ್ತ ದಲಿತ ಸಂಘಟನೆಗಳ ನೇತೃತ್ವದಲ್ಲಿ ಶಿಬಾಜೆ ಗ್ರಾಮದಲ್ಲಿ ದಲಿತ ಯುವಕ ಶ್ರೀಧರ್ ಅವರ

ಅಮಾನುಷ ಕೊಲೆಯನ್ನು ಖಂಡಿಸಿ, ಪ್ರಕರಣವನ್ನು ಉನ್ನತ ಮಟ್ಟದಲ್ಲಿ ತನಿಖೆ ನಡೆಸುವಂತೆ ಒತ್ತಾಯಿಸಿ, ಶಿಬಾಜೆ ಗ್ರಾಮ ಮತ್ತು ರಾಜ್ಯಾದ್ಯಂತ ನಡೆಯುತ್ತಿರುವ ದಲಿತರ ಮೇಲಿನ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳ ಸಮಗ್ರ ತನಿಖೆಗೆ ಆಗ್ರಹಿಸಿ ಧರ್ಮಸ್ಥಳದ ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ಹಾಗೂ ಪೊಲೀಸ್ ಠಾಣೆಯ ಎದುರು ಬೃಹತ್ ಪ್ರತಿಭಟನೆ ಜ.23 ರಂದು ನಡೆಯಿತು.
ಪ್ರತಿಭಟನೆಯನ್ನು ಉದ್ದೇಶಿಸಿ ರಾಜ್ಯ ಸಂಘಟನಾ ಸಂಚಾಲಕ ಮಲ್ಲೇಶ್ ಅಂಬುಗ, ಮಾತನಾಡಿ, ದಲಿತ ಮೇಲೆ ದೌರ್ಜನ್ಯ ಒಂದು ಜಿಲ್ಲೆಯ ಸಮಸ್ಯೆಯಲ್ಲ, ಇಡೀ ರಾಜ್ಯದಲ್ಲಿ ದಲಿತರನ್ನು ದಮನಿಸುವ ಕಾರ್ಯ ಇಂದು ನಡೆಯುತ್ತಿದೆ. ನಮಗೆ ರಕ್ಷಣೆ ನೀಡಿ, ಜನಸ್ನೇಹಿಯಾಗಬೇಕಾಗಿದ್ದ ಪೊಲೀಸರು, ದಲಿತರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ, ಡಿಎಸ್‌ಎಸ್ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್,
ದ.ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಂಚಾಡಿ ಮಾತನಾಡಿದರು.
ಪ್ರತಿಭಟನೆಯಲ್ಲಿ ಮುಖಂಡರಾದ ನೇಮಿರಾಜ ಕಿಲ್ಲೂರು, ಶೇಖರ ಕುಕ್ಕೇಡಿ, ರಮೇಶ್. ಆರ್, ತಾಲೂಕು ಮೋಗೇರ ಸಂಘದ ಅಧ್ಯಕ್ಷ ಕೊರಗಪ್ಪ ಅಳದಂಗಡಿ, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್ ಕನ್ಯಾಡಿ, ಸೇಸಪ್ಪ ಬೆದ್ರಕಾಡು, ಆನಂದ ಮಂಗಳೂರು, ವಸಂತ ಕುಬಲಾಡಿ, ಮೋನಪ್ಪ ಚಿಕ್ಕಮಗಳೂರು, ಪ್ರಭಾಕರ ನಲ್ಕೆ, ಗಿರೀಶ್ ಉಳ್ಳಾಲ, ಮೋನಪ್ಪ ಮೂಡಿಗೆರೆ, ಶೇಖರ್. ಎಲ್, ಬೇಬಿ ಸುವರ್ಣ, ಲೋಕೇಶ್ ಪಡುಬಿದ್ರೆ, ರವಿ ಮೂಡಿಗೆರೆ ಹಾಗೂ ಡಿಎಸ್‌ಎಸ್ ತಾಲೂಕಿನ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು. ಪ್ರತಿಭಟನೆಗೆ ಮಾಜಿ ಸಚಿವ ಕೆ. ಗಂಗಾಧರ ಗೌಡ, ಬೆಸ್ಟ್ ಪೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಕ್ಷಿತ್ ಶಿವರಾಂ, ಕಾರ್ಮಿಕ ಮುಖಂಡ ಬಿ.ಎಂ ಭಟ್, ಎಲ್. ಮಂಜುನಾಥ್ ಆಗಮಿಸಿ ಬೆಂಬಲ ಸೂಚಿಸಿದರು. ಪ್ರತಿಭಟನೆಗೆ ಮೊದಲು ನೇತ್ರಾವತಿಯಿಂದ ಧರ್ಮಸ್ಥಳ ಪೊಲೀಸ್ ಠಾಣೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಯಿತು.

Related posts

ಸವಣಾಲು : ಫಲ್ಗುಣಿ ಮಹಿಳಾ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ 12 ವರ್ಷ : ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಮೌಲ್ಯ ಶಿಕ್ಷಣ” ಪುಸ್ತಕ ರಚನೆ ಸಮಿತಿಗೆ ಸಂಪನ್ಮೂಲ ವ್ಯಕ್ತಿಯಾಗಿ ಡಾ. ಐ. ಶಶಿಕಾಂತ್ ಜೈನ್ ಆಯ್ಕೆ

Suddi Udaya

ಬಳಂಜ ಶಾಲಾ ವಿದ್ಯಾರ್ಥಿಗಳಿಗೆ ಸ್ಪೋಕನ್ ಇಂಗ್ಲಿಷ್ ತರಗತಿ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘದ 18ನೇ ವರ್ಷದ ವಾರ್ಷಿಕೋತ್ಸವ-ವಿಶ್ವಕರ್ಮ ಪೂಜೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ

Suddi Udaya
error: Content is protected !!