25.5 C
ಪುತ್ತೂರು, ಬೆಳ್ತಂಗಡಿ
June 8, 2026
ಕೃಷಿ

ಬಂದಾರು ತರಕಾರಿ ಕೃಷಿ ತರಬೇತಿ ಕಾರ್ಯಕ್ರಮ

ಬಂದಾರು:ಜ 24:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಬಂದಾರು ಕಾರ್ಯಕ್ಷೇತ್ರ ದಲ್ಲಿ “ರೈತ ಕ್ಷೇತ್ರ ಪಾಠ ಶಾಲೆ ” ಕಾರ್ಯಕ್ರಮದಡಿಯಲ್ಲಿ ತರಕಾರಿ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವು ಪುಯಿಲ ಸೇಸಪ್ಪ ಗೌಡರ ಮನೆಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.


ಯೋಜನಾಧಿಕಾರಿ ಶ್ರೀಯುತ ಯಶವಂತರವರು ತರಕಾರಿ ಕೃಷಿ ತರಬೇತಿ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಕೇಂದ್ರ ಕಚೇರಿಯ ಯೋಜನಾಧಿಕಾರಿ ಶ್ರೀ ಸುಧೀರ್ ಜೈನ್ ರವರು ಲಾಭದಾಯಕ ತರಕಾರಿ ಕೃಷಿ ಮತ್ತು ತರಕಾರಿ ರೈತೊತ್ಪಾದಕ ಸಹಕಾರಿ ಸಂಘ ದ ಬಗ್ಗೆ ಮಾಹಿತಿ ನೀಡಿದರು.
ಸಿದ್ದವನ ನರ್ಸರಿಯ ಶ್ರೀ ವಾಸು ಕುಮಾರ್ ರವರು ಬೀಜಗಳ ಆಯ್ಕೆ ಮತ್ತು ಗಿಡಗಳ ಕಸಿ ಕಟ್ಟುವಿಕೆ ಬಗ್ಗೆ ಮಾಹಿತಿ ನೀಡಿದರು.
ಈ ತರಬೇತಿ ಕಾರ್ಯಕ್ರಮ ದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ.ಗೌಡ ,ಬಂದಾರು ಹಾಗೂ ಮೈರೋಳ್ತಡ್ಕ ಒಕ್ಕೂಟ ದ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಮತ್ತು ಶ್ರೀಯುತ ಕೃಷ್ಣಯ್ಯ ಆಚಾರ್ಯ ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಉದಯ ಬಿ. ಕೆ ಹಾಗೂ ಬಂದಾರು ಗ್ರಾಮದ ತರಕಾರಿ ಕೃಷಿ ಬೆಳೆಯುವ ರೈತರು ಉಪಸ್ಥಿತರಿದ್ದರು
ತಾಲೂಕ್ ಕೃಷಿ ಅಧಿಕಾರಿ ಭಾಸ್ಕರ್ ರವರು ಕಾರ್ಯಕ್ರಮ ನಿರೂಪಿಸಿದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮರವರು ಸ್ವಾಗತಿಸಿ, ಸೇವಾಪ್ರತಿನಿಧಿ ನಿರಂಜನ್ ಧನ್ಯವಾದ ನೀಡಿದರು. ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ರವರು ಸಹಕರಿಸಿದರು.
ವರದಿ : ಶ್ರೀಮತಿ ಚಂದ್ರಕಲಾ

Related posts

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಪರಿಸರ ದಿನಾಚರಣೆ

Suddi Udaya

ಕುವೆಟ್ಟು ಗ್ರಾ.ಪಂ.ನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಬೆಳ್ತಂಗಡಿ: ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ಹಾಗೂ ಹಸಿರೆಲೆ ಗೊಬ್ಬರ ಬೀಜ ದಾಸ್ತಾನು ಲಭ್ಯ

Suddi Udaya

ಸಿರಿ ಸಮೃದ್ಧಿ ನೇಜಿ ನೆಡುವ ಕಾರ್ಯಕ್ರಮ

Suddi Udaya
error: Content is protected !!