37.9 C
ಪುತ್ತೂರು, ಬೆಳ್ತಂಗಡಿ
March 6, 2026
ಕೃಷಿ

ಬಂದಾರು ತರಕಾರಿ ಕೃಷಿ ತರಬೇತಿ ಕಾರ್ಯಕ್ರಮ

ಬಂದಾರು:ಜ 24:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಕಣಿಯೂರು ವಲಯದ ಬಂದಾರು ಕಾರ್ಯಕ್ಷೇತ್ರ ದಲ್ಲಿ “ರೈತ ಕ್ಷೇತ್ರ ಪಾಠ ಶಾಲೆ ” ಕಾರ್ಯಕ್ರಮದಡಿಯಲ್ಲಿ ತರಕಾರಿ ಕೃಷಿ ಬಗ್ಗೆ ತರಬೇತಿ ಕಾರ್ಯಕ್ರಮವು ಪುಯಿಲ ಸೇಸಪ್ಪ ಗೌಡರ ಮನೆಯಲ್ಲಿ ತರಬೇತಿ ಕಾರ್ಯಕ್ರಮ ನಡೆಯಿತು.


ಯೋಜನಾಧಿಕಾರಿ ಶ್ರೀಯುತ ಯಶವಂತರವರು ತರಕಾರಿ ಕೃಷಿ ತರಬೇತಿ ಬಗ್ಗೆ ಪ್ರಾಸ್ತಾವಿಕ ಮಾತನಾಡಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ವಿಭಾಗದ ಕೇಂದ್ರ ಕಚೇರಿಯ ಯೋಜನಾಧಿಕಾರಿ ಶ್ರೀ ಸುಧೀರ್ ಜೈನ್ ರವರು ಲಾಭದಾಯಕ ತರಕಾರಿ ಕೃಷಿ ಮತ್ತು ತರಕಾರಿ ರೈತೊತ್ಪಾದಕ ಸಹಕಾರಿ ಸಂಘ ದ ಬಗ್ಗೆ ಮಾಹಿತಿ ನೀಡಿದರು.
ಸಿದ್ದವನ ನರ್ಸರಿಯ ಶ್ರೀ ವಾಸು ಕುಮಾರ್ ರವರು ಬೀಜಗಳ ಆಯ್ಕೆ ಮತ್ತು ಗಿಡಗಳ ಕಸಿ ಕಟ್ಟುವಿಕೆ ಬಗ್ಗೆ ಮಾಹಿತಿ ನೀಡಿದರು.
ಈ ತರಬೇತಿ ಕಾರ್ಯಕ್ರಮ ದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಪರಮೇಶ್ವರಿ ಕೆ.ಗೌಡ ,ಬಂದಾರು ಹಾಗೂ ಮೈರೋಳ್ತಡ್ಕ ಒಕ್ಕೂಟ ದ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಮತ್ತು ಶ್ರೀಯುತ ಕೃಷ್ಣಯ್ಯ ಆಚಾರ್ಯ ,ಬಂದಾರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಶ್ರೀ ಉದಯ ಬಿ. ಕೆ ಹಾಗೂ ಬಂದಾರು ಗ್ರಾಮದ ತರಕಾರಿ ಕೃಷಿ ಬೆಳೆಯುವ ರೈತರು ಉಪಸ್ಥಿತರಿದ್ದರು
ತಾಲೂಕ್ ಕೃಷಿ ಅಧಿಕಾರಿ ಭಾಸ್ಕರ್ ರವರು ಕಾರ್ಯಕ್ರಮ ನಿರೂಪಿಸಿದರು. ವಲಯದ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮರವರು ಸ್ವಾಗತಿಸಿ, ಸೇವಾಪ್ರತಿನಿಧಿ ನಿರಂಜನ್ ಧನ್ಯವಾದ ನೀಡಿದರು. ಸೇವಾಪ್ರತಿನಿಧಿ ಶ್ರೀಮತಿ ಚಂದ್ರಕಲಾ ರವರು ಸಹಕರಿಸಿದರು.
ವರದಿ : ಶ್ರೀಮತಿ ಚಂದ್ರಕಲಾ

Related posts

ಧರ್ಮಸ್ಥಳ: ಶ್ರೀ ಮಂ.ಸ್ವಾ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸಂಘದ ರೈತ ಸದಸ್ಯರಿಗೆ ಉಚಿತ ತರಕಾರಿ ಬೀಜ ವಿತರಣಾ ಕಾರ್ಯಕ್ರಮ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya
error: Content is protected !!