22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿರಾಜ್ಯ ಸುದ್ದಿ

ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲರ ಸಮ್ಮೇಳನವಾಗಲಿ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಉಜಿರೆಯಲ್ಲಿ ಫೆಬ್ರವರಿ 03, 04 ಮತ್ತು 05ರಂದು ನಡೆಯಲಿರುವ ದ ಕ ಜಿಲ್ಲಾ 25ನೇ ಕನ್ನಡ ಸಾಹಿತ್ಯ ಸಮ್ಮೇಳನದ ಯಶಸ್ಸಿಗೆ ಸರ್ವರ ಸಹಕಾರ ಲಭ್ಯವಾಗಿ ಸಮ್ಮೇಳನವು ಎಲ್ಲರ ಸಮ್ಮೇಳನವಾಗಲಿ ಎಂಬ ಆಶಯವನ್ನು ವ್ಯಕ್ತಪಡಿಸುತ್ತಾ, ಈ ಸಮ್ಮೇಳನವು ಬೆಳ್ತಂಗಡಿ ತಾಲೂಕಿನಲ್ಲಿ ಜರಗುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ. ಬಹಳಷ್ಟು ವಿಚಾರಗಳು ಸಮ್ಮೇಳನದಲ್ಲಿ ಚರ್ಚೆಯಾಗಲಿದ್ದು, ನಾಡಿನ ಭಾಷೆ , ಸಂಸ್ಕೃತಿ ಮತ್ತು ಸಾಹಿತ್ಯಿಕ ವಾತಾವರಣ ಬೆಳೆಸುವಲ್ಲಿ ಒಳ್ಳೆಯ ಪ್ರೇರಣೆ ಮತ್ತು ಮಾರ್ಗದರ್ಶನ ನೀಡುವಂತಾಗಲಿ ಎಂದು ಮಾನ್ಯ ಶಾಸಕರಾದ ಹರೀಶ್ ಪೂಂಜರವರು ಆಶಿಸಿದರು‌.
ಮಾನ್ಯ ಶಾಸಕರು ಜಿಲ್ಲಾ ಸಮ್ಮೇಳನದ ಸ್ವಾಗತ ಸಮಿತಿ ಮತ್ತು ಸಂಯೋಜನಾ ಸಮಿತಿಯ ಸದಸ್ಯರ ಭೇಟಿ ಸಂದರ್ಭದಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ವಿಚಾರ ವಿನಿಮಯ ನಡೆಸುವ ಸಂದರ್ಭದಲ್ಲಿ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದರು.

ಮಾನ್ಯ ಶಾಸಕರು ಸಮ್ಮೇಳನದ ಸಂಯೋಜನಾ ಸಮಿತಿಯ ಗೌರವ ಕಾರ್ಯಾಧ್ಯಕ್ಷರೂ ಆಗಿರುವುದರಿಂದ, ಅವರಿಗೆ ಆಮಂತ್ರಣ ಪತ್ರಿಕೆ ನೀಡುವುದರೊಂದಿಗೆ ಸಮ್ಮೇಳನದ ಕೆಲಸ ಕಾರ್ಯಗಳ ಪ್ರಗತಿಯ ಬಗ್ಗೆಯೂ ಅವರೊಂದಿಗೆ ಚರ್ಚಿಸಲಾಯಿತು.

ಸಮ್ಮೇಳನದ ಸಂಯೋಜನಾ ಸಮಿತಿಯು ಮಾನ್ಯ ಶಾಸಕರ ಭೇಟಿಯನ್ನು ಅವರ ಮನೆಯಲ್ಲಿ, ಉಜಿರೆ ಗ್ರಾಮ ಪಂಚಾಯತ್ ಆಧ್ಯಕ್ಷರಾದ ಶ್ರೀಮತಿ ಪುಷ್ಪಾವತಿ ಆರ್ ಶೆಟ್ಟಿಯವರ ನೇತೃತ್ವದಲ್ಲಿ ಮಾಡಿದ್ದು , ಜಿಲ್ಲಾ ಕ ಸಾ ಪ ದ ಅಧ್ಯಕ್ಷರಾದ ಡಾ. ಎಂ ಪಿ ಶ್ರೀನಾಥ, ಗೌರವ ಕಾರ್ಯದರ್ಶಿಗಳಾದ ಶ್ರೀಮತಿ ರಾಜೇಶ್ವರಿ, ಬೆಳ್ತಂಗಡಿ ತಾಲೂಕು ಕ ಸಾ ಪ ಅಧ್ಯಕ್ಷರಾದ ಡಿ. ಯದುಪತಿ ಗೌಡ, ಸಮ್ಮೇಳನದ ಪ್ರಧಾನ ಕಾರ್ಯದರ್ಶಿ ರಾಮಕೃಷ್ಣ ಭಟ್ ಬೆಳಾಲು ಮತ್ತು ಕಾರ್ಯದರ್ಶಿ ರಮೇಶ್ ಮಯ್ಯ ಉಜಿರೆ ಇವರು ಜೊತೆಗಿದ್ದರು.

Related posts

ಕೊಕ್ಕಡ: ಸಂಗಮ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ಮಹಾಸಭೆ ಹಾಗೂ ಪದಾಧಿಕಾರಿಗಳ ಪದಗ್ರಹಣ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya

ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಲಾರೆನ್ಸ್ ಮುಕ್ಕುಝಿಯವರನ್ನು ಭೇಟಿಯಾದ ಎಸ್‌ಡಿಪಿಐಯ ಜಿಲ್ಲಾ ನಾಯಕರು

Suddi Udaya

ಕಳೆಂಜ–ಶಿಶಿಲ ಗ್ರಾಮದ ಸರ್ವೇ ನಂ.309ರ ಕೃಷಿ ಭೂಮಿ ಸಮಸ್ಯೆ: ಜಿಲ್ಲಾಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿಗಳೊಂದಿಗೆ ಚರ್ಚೆ -ಶಾಸಕ ಹರೀಶ್ ಪೂಂಜ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಕಲ್ಮಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!