25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

ಉಜಿರೆ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರಿಗೆ ರಾಜನ್ ದೈವ ಜುಮಾದಿ ಬಂಟ ನೀಡಿರುವ ಅಭಯದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಉಜಿರೆ ಗ್ರಾಮ ಪಂಚಾಯತ್‌ಉಪಾಧ್ಯಕ್ಷ ರವಿಕುಮಾರ್ ಬರೆಮೇಲುರವರ ಮನೆಯಲ್ಲಿ ಜ.6ರಂದು ನಡೆದ ಧರ್ಮ ದೈವಗಳ ನೇಮೋತ್ಸವದ ವೇಳೆ ರಾಜನ್ ದೈವ ಜುಮಾದಿ ಬಂಟನ ನುಡಿಕಟ್ಟಿನ ವೇಳೆ ಶಾಸಕ ಹರೀಶ್ ಪೂಂಜ ಆಗಮಿಸಿದ್ದರು. ಈ ವೇಳೆ ಪ್ರಸಾದ ನೀಡುವಾಗ ಊರಿನ ಅರಸ ಅಂತ ಶಾಸಕರನ್ನು ಸಂಬೋಧಿಸಿದ ದೈವ ಪಟ್ಟದಲ್ಲಿ ಕೂರಿಸಿದ್ದೇನೆ,ಇದ್ರಿಂದ ಕೆಳಗೆ ಇಳಿಯಲು ಬಿಡುವುದಿಲ್ಲ, ಇನ್ನೂ ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆಂದು ಅಭಯ ನೀಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೈವದ ಅಭಯದ ನುಡಿ:
ನೆನಪಂದೆ ಪಟ್ಟೊಡು ಕುಲ್ಲದೆ,ಉಂದೆನ್ ನನ ತಿರ್ತ್ ಜಪ್ಪರೆ ಬುಡ್ಪುಜಿ. ಈ ಕಾಲೋಗು ಕಂಬುಲಗ್ ಜೈದರ್ ಮಂಜೊಟ್ಟಿಗ್ ಯಾನ್ ಎತ್ತವೆ. ಮಂಜೋಟ್ಟಿಗ್ ಎತ್ತದ್ ಇತ್ತೆ ಕುಲ್ದುನ ಸ್ಥಾನಮಾನೋರ್ದು ಏರಿಕೆದ ಸ್ಥಾನಡ್ ಕುಲ್ಲದ್, ಮೂಡಾಯಿ ಕ್ಷೇತ್ರೋಗು ಬೋಡಾಪುನ ಅರಸುಂದ್ ಪನ್ಪವೆ.
(ಹಿಂದಿನ ಬಾರಿ ಪಟ್ಟದಲ್ಲಿ ಕೂರಿಸಿದ್ದೇನೆ,ಇಲ್ಲಿಂದ ಕೆಳಗೆ ಇಳಿಯಲು ನಾನು ಬಿಡುವುದಿಲ್ಲ.ಈ ಸಲ ಮತ್ತೆ ಕಂಬಳಕ್ಕೆ ಇಳಿದಿದ್ದೀರಿ, ಮಂಜೊಟ್ಟಿಗೆ (ಕಂಬಳ ಕೋಣ ಗುರಿ ಮುಟ್ಟುವ ಸ್ಥಳ)ನಾನು ತಲುಪಿಸುತ್ತೇನೆ. ಅಷ್ಟೇ ಅಲ್ಲ ಈಗಿರುವ ಸ್ಥಾನಕ್ಕಿಂತ ಮೇಲಿನ ಸ್ಥಾನದಲ್ಲಿ ಕುಳ್ಳಿರಿಸಿ, ಮೂಡಾಯಿ ಕ್ಷೇತ್ರಕ್ಕೆ ಬೇಕೇ ಬೇಕಾದ ಅರಸ ಅಂತ ಹೇಳಿಸುತ್ತೇನೆ )
ಎಂದು ದೈವ ನೀಡಿದ ಅಭಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Related posts

ಬೆಳ್ತಂಗಡಿ ಅಖಿಲ ಭಾರತ ಬ್ಯಾರಿ ಮಹಾಸಭಾ ಪ್ರತಿನಿಧಿ ಸಭೆಯ ಪೂರ್ವಭಾವಿ ಸಭೆ

Suddi Udaya

ನಾಲ್ಕೂರು: ಭಾರಿ ಮಳೆಗೆ ಕುರೆಲ್ಯ ರಾಜೇಂದ್ರ ಶೆಟ್ಟಿಯವರ ಮನೆಗೆ ಬರೆ ಕುಸಿದು ಹಾನಿ: ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಭೇಟಿ

Suddi Udaya

ನಾಳೆ(ಜೂ.23): ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಸಂಸದ ಬ್ರಿಜೇಶ್ ಚೌಟ ಭಾಗಿ

Suddi Udaya

ನಾರ್ಯ ಪೊದುಂಬಿಲ ಕೆಸರ್ ದ ಕಂಡಡ್ ಪರ್ಬದ ಗೊಬ್ಬು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನ.14: ಮಡಂತ್ಯಾರು ಸಹಕಾರಿ ಸಂಘದ ನೇತೃತ್ವದಲ್ಲಿ 72ನೇ ಸಹಕಾರಿ ಸಪ್ತಾಹ, ಪೂರ್ವಭಾವಿ ಸಭೆ

Suddi Udaya

ನಾವೂರು: ಮುರ ಮದರಸದಲ್ಲಿ ಮಾದಕ ದ್ರವ್ಯ ವಿರುದ್ಧದ ಅಭಿಯಾನ ಹಾಗೂ ಸ್ನೇಹ ಸಹವಾಸ ಶಿಬಿರ

Suddi Udaya
error: Content is protected !!