23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

ಉಜಿರೆ : ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜರಿಗೆ ರಾಜನ್ ದೈವ ಜುಮಾದಿ ಬಂಟ ನೀಡಿರುವ ಅಭಯದ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ. ಉಜಿರೆ ಗ್ರಾಮ ಪಂಚಾಯತ್‌ಉಪಾಧ್ಯಕ್ಷ ರವಿಕುಮಾರ್ ಬರೆಮೇಲುರವರ ಮನೆಯಲ್ಲಿ ಜ.6ರಂದು ನಡೆದ ಧರ್ಮ ದೈವಗಳ ನೇಮೋತ್ಸವದ ವೇಳೆ ರಾಜನ್ ದೈವ ಜುಮಾದಿ ಬಂಟನ ನುಡಿಕಟ್ಟಿನ ವೇಳೆ ಶಾಸಕ ಹರೀಶ್ ಪೂಂಜ ಆಗಮಿಸಿದ್ದರು. ಈ ವೇಳೆ ಪ್ರಸಾದ ನೀಡುವಾಗ ಊರಿನ ಅರಸ ಅಂತ ಶಾಸಕರನ್ನು ಸಂಬೋಧಿಸಿದ ದೈವ ಪಟ್ಟದಲ್ಲಿ ಕೂರಿಸಿದ್ದೇನೆ,ಇದ್ರಿಂದ ಕೆಳಗೆ ಇಳಿಯಲು ಬಿಡುವುದಿಲ್ಲ, ಇನ್ನೂ ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆಂದು ಅಭಯ ನೀಡಿದ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ದೈವದ ಅಭಯದ ನುಡಿ:
ನೆನಪಂದೆ ಪಟ್ಟೊಡು ಕುಲ್ಲದೆ,ಉಂದೆನ್ ನನ ತಿರ್ತ್ ಜಪ್ಪರೆ ಬುಡ್ಪುಜಿ. ಈ ಕಾಲೋಗು ಕಂಬುಲಗ್ ಜೈದರ್ ಮಂಜೊಟ್ಟಿಗ್ ಯಾನ್ ಎತ್ತವೆ. ಮಂಜೋಟ್ಟಿಗ್ ಎತ್ತದ್ ಇತ್ತೆ ಕುಲ್ದುನ ಸ್ಥಾನಮಾನೋರ್ದು ಏರಿಕೆದ ಸ್ಥಾನಡ್ ಕುಲ್ಲದ್, ಮೂಡಾಯಿ ಕ್ಷೇತ್ರೋಗು ಬೋಡಾಪುನ ಅರಸುಂದ್ ಪನ್ಪವೆ.
(ಹಿಂದಿನ ಬಾರಿ ಪಟ್ಟದಲ್ಲಿ ಕೂರಿಸಿದ್ದೇನೆ,ಇಲ್ಲಿಂದ ಕೆಳಗೆ ಇಳಿಯಲು ನಾನು ಬಿಡುವುದಿಲ್ಲ.ಈ ಸಲ ಮತ್ತೆ ಕಂಬಳಕ್ಕೆ ಇಳಿದಿದ್ದೀರಿ, ಮಂಜೊಟ್ಟಿಗೆ (ಕಂಬಳ ಕೋಣ ಗುರಿ ಮುಟ್ಟುವ ಸ್ಥಳ)ನಾನು ತಲುಪಿಸುತ್ತೇನೆ. ಅಷ್ಟೇ ಅಲ್ಲ ಈಗಿರುವ ಸ್ಥಾನಕ್ಕಿಂತ ಮೇಲಿನ ಸ್ಥಾನದಲ್ಲಿ ಕುಳ್ಳಿರಿಸಿ, ಮೂಡಾಯಿ ಕ್ಷೇತ್ರಕ್ಕೆ ಬೇಕೇ ಬೇಕಾದ ಅರಸ ಅಂತ ಹೇಳಿಸುತ್ತೇನೆ )
ಎಂದು ದೈವ ನೀಡಿದ ಅಭಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Related posts

ಓಡಿಲ್ನಾಳ ಸ.ಉ. ಪ್ರಾ ಶಾಲೆಯಲ್ಲಿ ವಿದ್ಯಾರ್ಥಿ ಮಂತ್ರಿ ಮಂಡಲದ ಚುನಾವಣೆ

Suddi Udaya

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya

ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಸ್ತ್ರೀ ಶಕ್ತಿ ಸಂವರ್ಧನಾ ತರಬೇತಿ

Suddi Udaya

ಸುಪ್ರೀಂ ಕೋರ್ಟ್ ಹಿರಿಯ ವಕೀಲರಾಗಿ ಶೇಖರ್ ಗೌಡ ದೇವಸ ಸವಣಾಲು ನೇಮಕ

Suddi Udaya

ಗಾಳಿ- ಮಳೆಗೆ ಕೋಳಿ ಸಾಕಾಣಿಕೆಯ ಶೆಡ್ ಕುಸಿದು ಬಿದ್ದು ಸಾವಿರಾರು ಕೋಳಿಗಳ ಸಾವು,ಲಕ್ಷಾಂತರ ರೂ ನಷ್ಟ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!