22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿ

ಲಾಯಿಲ: ಪುತ್ರ ಬೈಲು ಗ್ರಂಥಾಲಯ ಕಟ್ಟಡಕ್ಕೆ ಶಿಲಾನ್ಯಾಸ

ಬೆಳ್ತಂಗಡಿ: ಕೆಆರ್ ಡಿಎಲ್ ಗ್ರಾಮ ಪಂಚಾಯತ್ ಲಾಯಿಲ ಸಹಕಾರದಲ್ಲಿ ಪರಿಶಿಷ್ಟ ಜಾತಿ ಪಂಗಡಗಳ ಯೋಜನೆಯಡಿಯಲ್ಲಿ ಪೆ.4ರಂದು ಲಾಯಿಲ ಗ್ರಾಮದ ಪುತ್ರಬೈಲು ಎಂಬಲ್ಲಿ 10 ಲಕ್ಷ ಅನುದಾನದ ಗ್ರಂಥಾಲಯಕ್ಕೆ ಶಿಲಾನ್ಯಾಸ ನೆರವೇರಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ಆಶಾ ಸಲ್ದಾನ,ಶಿಲಾನ್ಯಾಸ ನೆರವೇರಿಸಿ ಗ್ರಾಮ ಪಂಚಾಯತ್ ಗ್ರಾಮದ ಸಮಗ್ರ ಅಭಿವೃದ್ಧಿಯ ಬಗ್ಗೆ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಹಂತ ಹಂತವಾಗಿ ಅಭಿವೃದ್ಧಿಯತ್ತ ಚಿಂತನೆ ನಡೆಸಲಾಗುವುದು ಎಂದರು.

ಉಪಾಧ್ಯಕ್ಷ ಗಣೇಶ್ ಆರ್ ಮಾತನಾಡಿ ಈಗಾಗಲೇ ಗ್ರಾಮಗಳಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿದ್ದು ಪಂಚಾಯತ್ ಸದಸ್ಯರುಗಳ ಹಾಗೂ ಗ್ರಾಮಸ್ಥರ ಸಹಕಾರದಲ್ಲಿ ಇನ್ನಷ್ಟು ಅಭಿವೃದ್ಧಿ ಪರ ಯೋಜನೆಗಳು ಅನುಷ್ಠಾನವಾಗಲಿದೆ ಎಂದರು.
ಮಸ್ತಕದ ಹಸಿವನ್ನು ನೀಗಿಸಿ ಜ್ಞಾನ ಭಂಡಾರ ಹೆಚ್ಚಿಸಲು ಇಂತಹ ಗ್ರಂಥಾಲಯಗಳು ಸಹಕಾರಿಯಾಗಲಿದೆ ಅದ್ದರಿಂದ ಗ್ರಾಮಗಳಲ್ಲಿ ಸುಸಜ್ಜಿತ ಗ್ರಂಥಾಲಯಗಳನ್ನು ನಿರ್ಮಿಸಬೇಕು ಈ ಮೂಲಕ ಸಾರ್ವಜನಿಕರು ಓದುವ ಗೀಳನ್ನು ಹೆಚ್ಚಿಸಿಕೊಳ್ಳಬೇಕು. ಲಾಯಿಲ ಗ್ರಾಮದ ಈ ಗ್ರಂಥಾಲಯ ಎಲ್ಲ ಓದುಗರುನ್ನು ಆಕರ್ಷಿಸಿ ತಾಲೂಕಿನಲ್ಲೇ ಮಾದರಿ ಗ್ರಂಥಾಲಯವಾಗಿ ಮೂಡಿಬರಲಿ ಎಂದು ಸದಸ್ಯ ಪ್ರಸಾದ್ ಶೆಟ್ಟಿ ಅಭಿಪ್ರಾಯ ಪಟ್ಟರು.ಸದಸ್ಯ ದಿನೇಶ್ ಶೆಟ್ಟಿ ಶುಭ ಹಾರೈಸಿದರು.ಈ ಸಂದರ್ಭದಲ್ಲಿ

ಗ್ರಾಮ ಪಂಚಾಯತ್ ಸದಸ್ಯರುಗಳಾದ ಮಹೇಶ್ ಕುಲಾಲ್, ಸವಿತ ಶೆಟ್ಟಿ, ಹರಿಕೃಷ್ಣ, ಸೇರಿದಂತೆ , ರಾಜೇಶ್ ಶೆಟ್ಟಿ, ಗಣೇಶ್ ಸಪಲ್ಯ, ಗುತ್ತಿಗೆದಾರ ರಮೇಶ್ ಲಾಯಿಲ ,ಸುಂದರ್ ಪುತ್ರಬೈಲ್, ಸುರೇಶ್ ಬೈರ ಪುತ್ರಬೈಲು, ಯಶೋಧ ರಾಘವೇಂದ್ರ ನಗರ, ಪಂಚಾಯತ್ ಸಿಬ್ಬಂದಿಗಳಾದ ಮೋಹನ್, ಹರ್ಷಿತಾ, ಹಾಗೂ ಸ್ಥಳೀಯರು ಉಪಸ್ಥಿತರಿದ್ದರು. ಜಾನಪದ ಕಲಾವಿದ ಉದಯ್ ಕುಮಾರ್ ಲಾಯಿಲ, ಕಾರ್ಯಕ್ರಮ ನಿರ್ವಹಿಸಿ ಧನ್ಯವಾದವಿತ್ತರು.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಗೊರೂರು ರಾಮಸ್ವಾಮಿ ಅಯ್ಯಂಗಾರ್ ಸಂಸ್ಮರಣಾರ್ಥ ಗೊರೂರು ಕಂಡ ಗಾಂಧಿ ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಮಹೇಶ್ ಶೆಟ್ಟಿಯವರು‌ ಕಾಂಗ್ರೆಸ್ ಗೆ ಬೆಂಬಲ‌ ನೀಡಿದ್ರೆ ಅದು ವ್ಯಕ್ತಿಗತ, ಪಕ್ಷವಾಗಿ ಅಲ್ಲ, ಶಶಿರಾಜ್ ಶೆಟ್ಟಿಯವರ ಆರೋಪ ಸತ್ಯಕ್ಕೆ ದೂರವಾದದ್ದು

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಬಳಿ ಕಾಂಗ್ರೇಸ್ ಪಕ್ಷದ ಚುನಾವಣಾ ಕಛೇರಿಯ ಉದ್ಘಾಟನೆ

Suddi Udaya

ಡೆನ್ನಾನ ಡೆನ್ನನ – 2023 ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕ ಚಾಂಪಿಯನ್

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!