July 23, 2026
ಅಪರಾಧ ಸುದ್ದಿಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

ಬೆಳ್ತಂಗಡಿ: ತಾಲೂಕಿನ ಉಜಿರೆ ಪರಿಸರದ ಕೆಲವು ಲಾಡ್ಜ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು & ಸಿಬ್ಬಂದಿಗಳ 5 ವಿಶೇಷ ತಂಡ , ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ, ಪ್ರತಾಪ್ ಸಿಂಗ್ ಥೋರಾಟ್ ರವರ ನೇತೃತ್ವದಲ್ಲಿ ಏಕಕಾಲದಲ್ಲಿ ಉಜಿರೆ ಪರಿಸರದ ಎಲ್ಲಾ ಲಾಡ್ಜ್ ಗಳ ಮೇಲೆ
ಫೆ. 6ರಂದು ದಾಳಿ ನಡೆಸಿ ಸಿಸಿಟಿವಿಗಳನ್ನು, ದಾಖಲಾತಿ ಪುಸ್ತಕ (ರಿಜಿಸ್ಟರ್) ಗಳನ್ನು ಪರಿಶೀಲನೆ ನಡೆಸಲಾಯಿತು.ಆದರೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ.

ಈ ವೇಳೆ ಲಾಡ್ಜ್ ಮಾಲೀಕರುಗಳಿಗೆ ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿರುವ ಎಲ್ಲಾ ಸಿಸಿಟಿವಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಹಾಗೂ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಭಕ್ತಾದಿಗಳಿಂದ ಗುರುತಿನ ಚೀಟಿಗಳನ್ನು ಪಡೆದು ರಿಜಿಸ್ಟ್ರರ್ ಪುಸ್ತಕಗಳಲ್ಲಿ ಸರಿಯಾಗಿ ದಾಖಲಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು , ಅಂತಹ ಕೃತ್ಯಗಳು ಲಾಡ್ಜ್ ಪರಿಸರಗಳಲ್ಲಿ ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ಲಾಡ್ಜ್ ಗಳ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಯಿತು. ಯಾವುದೇ ನಿಯಮಾವಳಿಗಳ ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಲಾಡ್ಜ್ ಗಳ ಪರವಾನಿಗೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಬಂದಲ್ಲಿ ಮುಂದಿನ ದಿನಗಳಲ್ಲಿಯೂ ಈ ರೀತಿಯ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುವುದು ಎಂದು ಸೂಚಿಸಲಾಯಿತು.

Related posts

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ:

Suddi Udaya

ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಟಿಕೆ ಪ್ರಕರಣ ಆರೋಪಿ ಉಸ್ಮಾನ್ ಗೆ ಜಾಮೀನು ಮಂಜೂರು

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಕುರಾಯ-ಬಂದಾರು ಶ್ರೀ ಸದಾಶಿವ ದೇವರ ವಾರ್ಷಿಕ ಜಾತ್ರೋತ್ಸವ-ದರ್ಶನ ಬಲಿ, ಬಟ್ಟಲು ಕಾಣಿಕೆ, ಶ್ರೀ ದೇವರಿಗೆ ಕಲಶಾಭಿಷೇಕ, ರುದ್ರಾಭಿಷೇಕ ಮಹಾಪೂಜೆ

Suddi Udaya

ಕರಂಬಾರು: ಮಾನಸಿಕ ಖಿನ್ನತೆಗೆ ಒಳಗಾಗಿ ನಾಗೇಶ್ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!