37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಪರಾಧ ಸುದ್ದಿಕರಾವಳಿಜಿಲ್ಲಾ ಸುದ್ದಿಪ್ರಮುಖ ಸುದ್ದಿ

ಉಜಿರೆ ಪರಿಸರದ ಕೆಲ ಲಾಡ್ಜಗಳಿಗೆ
ಬಂಟ್ವಾಳ ಉಪ ವಿಭಾಗದ ಡಿವೈಎಸ್ಪಿ, ನೇತೃತ್ವದಲ್ಲಿ ದಾಳಿ: ಕಾನೂನು ಬಾಹಿರ ಚಟುವಟಿಕೆ ನಡೆಸದಂತೆ ಸೂಚನೆ

ಬೆಳ್ತಂಗಡಿ: ತಾಲೂಕಿನ ಉಜಿರೆ ಪರಿಸರದ ಕೆಲವು ಲಾಡ್ಜ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂಬ ದೂರಿನ ಆಧಾರದಲ್ಲಿ ಬಂಟ್ವಾಳ ಉಪ ವಿಭಾಗದ ಅಧಿಕಾರಿಗಳು & ಸಿಬ್ಬಂದಿಗಳ 5 ವಿಶೇಷ ತಂಡ , ಬಂಟ್ವಾಳ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ, ಪ್ರತಾಪ್ ಸಿಂಗ್ ಥೋರಾಟ್ ರವರ ನೇತೃತ್ವದಲ್ಲಿ ಏಕಕಾಲದಲ್ಲಿ ಉಜಿರೆ ಪರಿಸರದ ಎಲ್ಲಾ ಲಾಡ್ಜ್ ಗಳ ಮೇಲೆ
ಫೆ. 6ರಂದು ದಾಳಿ ನಡೆಸಿ ಸಿಸಿಟಿವಿಗಳನ್ನು, ದಾಖಲಾತಿ ಪುಸ್ತಕ (ರಿಜಿಸ್ಟರ್) ಗಳನ್ನು ಪರಿಶೀಲನೆ ನಡೆಸಲಾಯಿತು.ಆದರೆ ಯಾವುದೇ ಪ್ರಕರಣ ಪತ್ತೆಯಾಗಿಲ್ಲ.

ಈ ವೇಳೆ ಲಾಡ್ಜ್ ಮಾಲೀಕರುಗಳಿಗೆ ಮುಂದಿನ ದಿನಗಳಲ್ಲಿ ಲಾಡ್ಜ್ ನಲ್ಲಿರುವ ಎಲ್ಲಾ ಸಿಸಿಟಿವಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ನೋಡಿಕೊಳ್ಳಲು ಹಾಗೂ ಲಾಡ್ಜ್ ನಲ್ಲಿ ತಂಗುವ ಪ್ರವಾಸಿಗರು ಮತ್ತು ಭಕ್ತಾದಿಗಳಿಂದ ಗುರುತಿನ ಚೀಟಿಗಳನ್ನು ಪಡೆದು ರಿಜಿಸ್ಟ್ರರ್ ಪುಸ್ತಕಗಳಲ್ಲಿ ಸರಿಯಾಗಿ ದಾಖಲಿಸಬೇಕು. ಯಾವುದೇ ಕಾನೂನು ಬಾಹಿರ ಚಟುವಟಿಕೆಗಳಿಗೆ ಅವಕಾಶ ನೀಡಬಾರದು , ಅಂತಹ ಕೃತ್ಯಗಳು ಲಾಡ್ಜ್ ಪರಿಸರಗಳಲ್ಲಿ ಕಂಡುಬಂದಲ್ಲಿ ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು, ಲಾಡ್ಜ್ ಗಳ ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಸೂಚಿಸಲಾಯಿತು. ಯಾವುದೇ ನಿಯಮಾವಳಿಗಳ ಉಲ್ಲಂಘನೆ ಕಂಡುಬಂದಲ್ಲಿ ಅಂತಹ ಲಾಡ್ಜ್ ಗಳ ಪರವಾನಿಗೆಯನ್ನು ರದ್ದುಪಡಿಸಲು ಸಂಬಂಧಪಟ್ಟ ಇಲಾಖೆಗಳಿಗೆ ವರದಿ ನೀಡಲಾಗುವುದು ಎಂದು ಎಚ್ಚರಿಕೆ ನೀಡಲಾಯಿತು. ಜಿಲ್ಲಾ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಚಟುವಟಿಕೆಗಳ ಕುರಿತು ಮಾಹಿತಿ ಬಂದಲ್ಲಿ ಮುಂದಿನ ದಿನಗಳಲ್ಲಿಯೂ ಈ ರೀತಿಯ ಅನಿರೀಕ್ಷಿತ ದಾಳಿಗಳನ್ನು ನಡೆಸಲಾಗುವುದು ಎಂದು ಸೂಚಿಸಲಾಯಿತು.

Related posts

ಪರೀಕ ಶ್ರೀ ಧ.ಮಂ. ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಸೌಖ್ಯವನದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ನವ ವಿವಾಹಿತ, ಕಂಪನಿ ಉದ್ಯೋಗಿ, ನಾಲ್ಕೂರಿನ ಯುವಕ ಮೈಸೂರಲ್ಲಿ ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸ.ಪ.ಪೂ. ಕಾಲೇಜು ವಿದ್ಯಾರ್ಥಿ ಮಂತ್ರಿ ಮಂಡಲದ ಪ್ರತಿಜ್ಞಾ ವಿಧಿ ಸ್ವೀಕಾರ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ

Suddi Udaya

ತೆಕ್ಕಾರು: ಭಟ್ರಬೈಲು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ದೇವರ ಮೂರ್ತಿಯ ಪುರಪ್ರವೇಶದ ಅದ್ದೂರಿ ಮೆರವಣಿಗೆ

Suddi Udaya

ಸಿದ್ದಕಟ್ಟೆ ಮಹಿಳೆ ಕಳೆದುಕೊಂಡ ಹಣವಿದ್ದ ಬ್ಯಾಗ್ ನ್ನು ಹಿಂತಿರುಗಿಸಿದ ಗರ್ಡಾಡಿ ಯುವಕ ವರುಣ್ ಪೂಜಾರಿ: ಯುವಕನ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾರಿಂದ ಅಭಿನಂದನೆ

Suddi Udaya
error: Content is protected !!