29.6 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬದನಾಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

Suddi Udaya

ಸುಲ್ಕೇರಿಮೊಗ್ರುವಿನಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ: ಕಂಬಳ ಕ್ಷೇತ್ರದಲ್ಲಿ ಸಾಧನೆಗೈದ ಕಿಂಗ್ ತಾಟೆ ಕೋಣಕ್ಕೆ ಸನ್ಮಾನ ಹಾಗೂ ಅಸಕ್ತರಿಗೆ ಅಕ್ಕಿ, ಧನಸಹಾಯ ವಿತರಣೆ

Suddi Udaya

ಬೆಳ್ತಂಗಡಿ ಡಿ. ಕೆ.ಆರ್.ಡಿ.ಎಸ್ – ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya
error: Content is protected !!