37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಉಜಿರೆ ಶ್ರೀ ಧ.ಮಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿಜ್ಞಾನ ವಿಚಾರ ಸಂಕಿರಣ ಮತ್ತು ವಿಜ್ಞಾನ ನಾಟಕ ಸ್ಪರ್ಧೆ

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ದಾನಿಗಳಿಂದ ಕಬಡ್ಡಿ ಮ್ಯಾಟ್ ಹಸ್ತಾಂತರ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯಿಂದ ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿಯಾಗಿ ಸಮಾಜ ಸೇವಕ ಕೆ. ಮೋಹನ್ ಕುಮಾರ್ ಆಯ್ಕೆ

Suddi Udaya
error: Content is protected !!