April 2, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ತರಬೇತಿ

Suddi Udaya

ಕೊಕ್ಕಡ ಪರಿಸರದಲ್ಲಿಒಂಟಿ ಸಲಗ ದಾಳಿ: ಅಪಾರ ಕೃಷಿ ಹಾನಿ

Suddi Udaya

ಜೆಸಿಐ ವಲಯ ಮಧ್ಯಂತರ ಸಮ್ಮೇಳನ: ಭಾಷಣ ಸ್ಪರ್ಧೆಯಲ್ಲಿ ಕು. ಕನ್ನಿಕಾರಿಗೆ ದ್ವಿತೀಯ ಸ್ಥಾನ

Suddi Udaya

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿ

Suddi Udaya

ಅರಸಿನಮಕ್ಕಿ: ಮಕ್ಕಳ ಸಂಸ್ಕಾರ ಶಿಬಿರದ ಮಾಹಿತಿ ಕರಪತ್ರ ಬಿಡುಗಡೆ

Suddi Udaya
error: Content is protected !!