24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಪೆರ್ನೆಯ ಯುವಕ ಯತೀಶ್ ಗೌಡ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಜೂನಿಯರ್ ಜೆಸಿ ಸಪ್ತಾಹ ಸಂಪನ್ನ

Suddi Udaya

ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿ ಕ್ಷಿತಿಜ್ ಶೆಟ್ಟಿ ಕುಮಿಟೆ ಹಾಗು ಕಟಾ ವಿಭಾಗದಲ್ಲಿ ಬೆಳ್ಳಿ ಪದಕ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಕುಣಿತ ಭಜನೆಯ ತರಬೇತಿ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಉಜಿರೆ: ರೆಂಜಾಳ ಗೆಳೆಯರ ಬಳಗ ಸೇವಾ ಟ್ರಸ್ಟ್ ನ ಮೊಸರುಕುಡಿಕೆ ಉತ್ಸವ ಸಮಿತಿ ರಚನೆ

Suddi Udaya
error: Content is protected !!