37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಎಸ್.ಡಿ.ಎಂ. ಕಾಲೇಜಿನಲ್ಲಿ ಭಗವದ್ಗೀತೆ ಮತ್ತು ಶಿಕ್ಷಣದ ಬಗ್ಗೆ ವೀಣಾ ಬನ್ನಂಜೆ ರವರಿಂದ ವಿಶೇಷ ಉಪನ್ಯಾಸ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಚಂದ್ರಶೇಖರ ಎಲ್. ಮತ್ತು ಮನೆಯವರಿಂದ ಸ್ಟೀಲ್ ತಟ್ಟೆ ಕೊಡುಗೆ

Suddi Udaya

ಧರ್ಮಸ್ಥಳ: ಟಾಟಾ ಸುಮೋ ಹಾಗೂ ಸ್ಕೂಟಿ ನಡುವೆ ರಸ್ತೆ ಅಪಘಾತ: ಸ್ಕೂಟಿ ಸವಾರ ಗಂಭೀರ ಗಾಯ

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಮರೋಡಿ 25 ಕೆವಿ ಸಾಮರ್ಥ್ಯದ ಪರಿವರ್ತಕ ಧರಾಶಾಯಿ: ಗಾಳಿ ಮಳೆ ಮೆಸ್ಕಾಂಗೆ 5 ಲಕ್ಷ ರೂ. ನಷ್ಟ

Suddi Udaya

ನ.14: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ರವರಿಂದ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮ

Suddi Udaya
error: Content is protected !!