23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿರಾಷ್ಟ್ರೀಯ ಸುದ್ದಿ

ಚೈನೈ: ಶಾಸ್ತ್ರೀಯ ಸಂಗೀತ ಆಕಾಶ್ ಕೃಷ್ಣ ದ್ವಿತೀಯ

ಬೆಳ್ತಂಗಡಿ: ರೋಟರಿ ಕ್ಲಬ್ ಆಫ್ ಚೆನ್ನೈ ಹಾಲ್‌ಮಾರ್ಕ್ ಕರ್ನಾಟಿಕ್ ಮ್ಯೂಸಿಕ್ ಕಂಟೆಸ್ಟ್ ಸೀಸನ್ 4 ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಸ್ಪರ್ಧೆಯ ಗೀತಂ ವಿಭಾಗದ ಗ್ರ್ಯಾಂಡ್ ಫಿನಾಲೆಯಲ್ಲಿ ಬೆಳ್ತಂಗಡಿಯ ಗರ್ಡಾಡಿ ಗ್ರಾಮದ ಮಾಸ್ಟರ್ ಆಕಾಶ್ ಕೃಷ್ಣ ದ್ವಿತೀಯ ಸ್ಥಾನ‌ ಪಡೆದಿದ್ದಾರೆ. ಇದೇ ಸ್ಪರ್ಧೆಯ ವರ್ಣಂ ವಿಭಾಗದಲ್ಲಿ ಆಕಾಶ್ ಸೆಮಿ ಫೈನಲ್‌ಗೆ ಆಯ್ಕೆಯಾಗಿದ್ದರು. ಆಕಾಶ್ ಕೃಷ್ಣ ಉಜಿರೆ ಎಸ್ ಡಿಎಂ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿಯಾಗಿದ್ದಾರೆ

. ಈ ಹಿಂದೆ ಮಂಗಳೂರಿನ ಪ್ರೆಸ್ಟೀಜಿಯಸ್ ಸಭಾ ಸಂಗೀತ ಪರಿಷತ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಹಾಡುಗಾರಿಕೆಯಲ್ಲಿ ಸತತ ಎರಡು ಬಾರಿ ಪ್ರಥಮ ಸ್ಥಾನ ಪಡೆದಿದ್ದು, ಇವರಿಗೆ ಶ್ರೀ ಕೃಷ್ಣಾಪುರ ವೆಂಕಟರಾವ್ ಮತ್ತು ಶ್ರೀಮತಿ ಲೀಲಾವತಿ ಯಂಗ್ ಟಾಲೆಂಟ್ ಅವಾರ್ಡ್ ನೀಡಿ ಗೌರವಿಸಲಾಗಿತ್ತು. ಇವರು ಡಾ. ವಿದುಷಿ ಶ್ರೀಮತಿ ಸುಚಿತ್ರಾ ಹೊಳ್ಳ ಪುತ್ತೂರು, ವಿದ್ವಾನ್ ವಿಶ್ವೇಶ್ ಸ್ವಾಮಿನಾಥನ್ ಅಯ್ಯರ್ ಮತ್ತು ವಿದುಷಿ ರಾಜೇಶ್ವರಿ ಸ್ವಾಮಿನಾಥನ್ ಅಯ್ಯರ್ ಚೆನ್ನೈ ಇವರ ಶಿಷ್ಯ. ಪ್ರಸ್ತುತ ವಿದ್ವಾನ್ ವೇಣುಗೋಪಾಲ್ ಶಾನುಭೋಗ್ ಅವರಿಂದ ವಯಲಿನ್ ಹಾಗೂ ಅಖಿಲಾ ಪಜಿಮಣ್ಣು ಅವರಿಂದ ಲೈಟ್ ಮ್ಯೂಸಿಕ್ ತರಬೇತಿ ಪಡೆಯಿತ್ತಿದ್ದಾರೆ. ಆಕಾಶ್ ಕೃಷ್ಣ ಗರ್ಡಾಡಿ ಗ್ರಾಮದ ಪೇರಡ್ಕ ಕೇಶವ ಭಟ್ & ಸಂಧ್ಯಾ ಕೆ ಭಟ್ ಅವರ ಸುಪುತ್ರ.

Related posts

ಎಕ್ಸೆಲ್ ಶೈಕ್ಷಣಿಕ ಸಾಧಕರಿಗೆ ಸನ್ಮಾನ ಮತ್ತು ಪ್ರತಿಭೆಗಳಿಗೆ ಬೆಳಕು ನೀಡುವ ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಂಗಳೂರಿನ ದಾಸನಪುರದಲ್ಲಿ ಬೆಳ್ತಂಗಡಿ ಭಜನಾ ತರಬೇತುದಾರರಿಂದ ವಿಶೇಷ ಭಜನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಉಚಿತ ನೇತ್ರಾ ತಪಾಸಣಾ ಮತ್ತು ಚಿಕಿತ್ಸಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ದೇಶಭಕ್ತಿಗೀತೆ ಸ್ಪರ್ಧೆಯಲ್ಲಿ ಬಹುಮಾನ

Suddi Udaya

ಶಾಸ್ತ್ರೀಯ ಸಂಗೀತ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಸರಸ್ವತಿ ಸಂಗೀತ ಶಾಲೆಗೆ ಶೇಕಡ 100 ಫಲಿತಾಂಶ

Suddi Udaya

ರಾಜ್ಯ ಮಟ್ಟದ ಪುರುಷರ ನೆಟ್ ಬಾಲ್ ಪಂದ್ಯಾಟ : ಎಸ್.ಡಿ.ಎಂ ತಂಡಕ್ಕೆ ಪ್ರಶಸ್ತಿ

Suddi Udaya
error: Content is protected !!