July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

ಕನ್ಯಾಡಿ: ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಫೆ.05 ರಂದು ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕಿನ ಮ್ಯಾನೆಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್ ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ, ಸೇವಾಭಾರತಿಯು ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸಮುದಾಯ ಹಾಗೂ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಮಾಡುವ ನಿರಂತರ ಸೇವೆಯನ್ನು ಶ್ಲಾಘಸಿದರು. 100ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಕರ್ನಾಟಕ ಬ್ಯಾಂಕ್, ಸಮಾಜದ ಕೊರತೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 1924 ರಿಂದಲೂ ಮಾನವೀಯತೆಯ ಸ್ಪರ್ಶದೊಂದಿಗೆ ಸಮಾಜ ಸೇವಾ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿರುತ್ತದೆ ಎಂದರು. ಸೇವಾಭಾರತಿಯ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಮುಂದಿನ ದಿನಗಳಲ್ಲಿ ಸಹಕರಿಸುವ ಭರವಸೆ ನೀಡಿ, ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು.

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಕೆ. ಎನ್ ಜನಾರ್ಧನ್ ಇವರು ಸೇವಾಭಾರತಿಯಿಂದ ನೀಡಿದ ನೀರಿನ ಹಾಸಿಗೆಗೆ ಧನ ಸಹಾಯದ ಚೆಕ್ಕನ್ನು ಫಲಾನುಭವಿಗೆ ಹಸ್ತಾಂತರಿಸಿ, ಸೇವಾಭಾರತಿ ಸಂಸ್ಥೆಯು ದಿವ್ಯಾಂಗರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಇಂತಹ ಸಂಸ್ಥೆಯ ಪ್ರಯೋಜನ ಪಡೆದು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸುವಲ್ಲಿ ಸಫಲರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕರುಗಳಾದ ವಿನಾಯಕ ಪ್ರಭು, ಪ್ರವೀಣ್, ಪದ್ಮಪ್ರಸಾದ್ ಆಳ್ವ, ಅವಿನಾಶ್ ಕೆ ಹಾಗೂ ಸೇವಾಧಾಮದ ಸಂಚಾಲಕರಾದ ಪುರಂದರ ರಾವ್, ಸಂಸ್ಥೆಯ ಅಧ್ಯಕ್ಷರಾದ ಕೆ ವಿನಾಯಕ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಚರಣ್ ಕುಮಾರ್ ಎಂ ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆ ಪುರಂದರ ರಾವ್ ಧನ್ಯವಾದ ವಿತ್ತರು.

Related posts

ಅಪರ ಜಿಲ್ಲಾಧಿಕಾರಿಯಾಗಿ ಡಾ. ಸಂತೋಷ್ ಕುಮಾರ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಿಡಿಗಲ್ ಶ್ರೀ ಸತ್ಯನಾರಾಯಣ ಭಜನಾ ಮಂದಿರದ ಹರಿ ಓಂ ಬಾಲ ಸಂಸ್ಕಾರ ಕೇಂದ್ರದ ಮಕ್ಕಳಿಗೆ ಬ್ಯಾಗ್, ಕೊಡೆ ಹಾಗೂ ಪುಸ್ತಕ ವಿತರಣೆ

Suddi Udaya

ಸಂಕಷ್ಟದಲ್ಲಿರುವ ಹೆಂಚು ಉದ್ಯಮ ಸೂಕ್ತ ಪರಿಹಾರ ಕ್ರಮಕ್ಕಾಗಿ ಪರಿಷತ್ ನಲ್ಲಿ ಪ್ರತಾಪಸಿಂಹ ನಾಯಕ್ ಆಗ್ರಹ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಅಂಡಿಂಜೆ: ಕಲ್ಲತ್ತಿ ಪ್ರದೇಶದಲ್ಲಿ ಅರಣ್ಯ ಇಲಾಖೆಯ ಗೇರು ಗಿಡಗಳಿಗೆ ಹತ್ತಿಕೊಂಡ ಬೆಂಕಿ

Suddi Udaya
error: Content is protected !!