September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

ಕನ್ಯಾಡಿ: ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಫೆ.05 ರಂದು ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕಿನ ಮ್ಯಾನೆಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್ ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ, ಸೇವಾಭಾರತಿಯು ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸಮುದಾಯ ಹಾಗೂ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಮಾಡುವ ನಿರಂತರ ಸೇವೆಯನ್ನು ಶ್ಲಾಘಸಿದರು. 100ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಕರ್ನಾಟಕ ಬ್ಯಾಂಕ್, ಸಮಾಜದ ಕೊರತೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 1924 ರಿಂದಲೂ ಮಾನವೀಯತೆಯ ಸ್ಪರ್ಶದೊಂದಿಗೆ ಸಮಾಜ ಸೇವಾ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿರುತ್ತದೆ ಎಂದರು. ಸೇವಾಭಾರತಿಯ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಮುಂದಿನ ದಿನಗಳಲ್ಲಿ ಸಹಕರಿಸುವ ಭರವಸೆ ನೀಡಿ, ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು.

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಕೆ. ಎನ್ ಜನಾರ್ಧನ್ ಇವರು ಸೇವಾಭಾರತಿಯಿಂದ ನೀಡಿದ ನೀರಿನ ಹಾಸಿಗೆಗೆ ಧನ ಸಹಾಯದ ಚೆಕ್ಕನ್ನು ಫಲಾನುಭವಿಗೆ ಹಸ್ತಾಂತರಿಸಿ, ಸೇವಾಭಾರತಿ ಸಂಸ್ಥೆಯು ದಿವ್ಯಾಂಗರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಇಂತಹ ಸಂಸ್ಥೆಯ ಪ್ರಯೋಜನ ಪಡೆದು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸುವಲ್ಲಿ ಸಫಲರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕರುಗಳಾದ ವಿನಾಯಕ ಪ್ರಭು, ಪ್ರವೀಣ್, ಪದ್ಮಪ್ರಸಾದ್ ಆಳ್ವ, ಅವಿನಾಶ್ ಕೆ ಹಾಗೂ ಸೇವಾಧಾಮದ ಸಂಚಾಲಕರಾದ ಪುರಂದರ ರಾವ್, ಸಂಸ್ಥೆಯ ಅಧ್ಯಕ್ಷರಾದ ಕೆ ವಿನಾಯಕ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಚರಣ್ ಕುಮಾರ್ ಎಂ ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆ ಪುರಂದರ ರಾವ್ ಧನ್ಯವಾದ ವಿತ್ತರು.

Related posts

ನಾಲ್ಕೂರು: ರಾಮನಗರದಲ್ಲಿ ಬ್ರಹ್ಮಕುಮಾರಿ ಸಂಸ್ಥೆಯಿಂದ ರಕ್ಷಾಬಂಧನ ಕಾರ್ಯಕ್ರಮ

Suddi Udaya

ಅಳದಂಗಡಿ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದಾಖಲೆಯ ರೂ. 2.12 ಕೋಟಿ ನಿವ್ವಳ ಲಾಭ

Suddi Udaya

ಜಿಲ್ಲಾ ಮಟ್ಟದ ಭಾವೈಕ್ಯತೆ ಮಕ್ಕಳ ಮೇಳ: ಕುಂಭಶ್ರೀ ಶಾಲಾ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ಮುಂಡಾಜೆ ಗ್ರಾ.ಪಂ. ಸಿಬ್ಬಂದಿ ಜನಾರ್ದನ ನಾಯ್ಕ ನಿಧನ

Suddi Udaya

ಮಡಂತ್ಯಾರು- ಪುಂಜಾಲಕಟ್ಟೆ ವರ್ತಕರ ಸಂಘದಿಂದ ಆರ್ಥಿಕ ನೆರವು

Suddi Udaya

ವಸಂತ ಶೆಟ್ಟಿ ಶ್ರದ್ದಾರವರಿಂದ 25ನೇ ಬಾರಿಗೆ ರಕ್ತದಾನ

Suddi Udaya
error: Content is protected !!