23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ದಿವ್ಯಾಂಗರಿಗೆ ಗಾಲಿ ಕುರ್ಚಿ ಗಳ ವಿತರಣೆ

ಕನ್ಯಾಡಿ: ಸೇವಾಭಾರತಿಯ ಅಂಗಸಂಸ್ಥೆಯಾದ ಸೇವಾಧಾಮದಿಂದ ಗುರುತಿಸಲ್ಪಟ್ಟ 5 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣಾ ಕಾರ್ಯಕ್ರಮ ಫೆ.05 ರಂದು ನಡೆಯಿತು.


ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕರ್ನಾಟಕ ಬ್ಯಾಂಕಿನ ಮ್ಯಾನೆಜಿಂಗ್ ಡೈರೆಕ್ಟರ್ ಹಾಗೂ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಮಹಾಬಲೇಶ್ವರ ಎಂ.ಎಸ್ ಗಾಲಿಕುರ್ಚಿಗಳನ್ನು ಹಸ್ತಾಂತರಿಸಿ, ಸೇವಾಭಾರತಿಯು ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ಸಮುದಾಯ ಹಾಗೂ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಮಾಡುವ ನಿರಂತರ ಸೇವೆಯನ್ನು ಶ್ಲಾಘಸಿದರು. 100ನೇ ವರ್ಷದ ಸಂಭ್ರಮಾಚರಣೆಯಲ್ಲಿರುವ ಕರ್ನಾಟಕ ಬ್ಯಾಂಕ್, ಸಮಾಜದ ಕೊರತೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ 1924 ರಿಂದಲೂ ಮಾನವೀಯತೆಯ ಸ್ಪರ್ಶದೊಂದಿಗೆ ಸಮಾಜ ಸೇವಾ ಕಾರ್ಯಗಳಿಗೆ ಹೆಚ್ಚು ಆದ್ಯತೆ ನೀಡುತ್ತಾ ಬಂದಿರುತ್ತದೆ ಎಂದರು. ಸೇವಾಭಾರತಿಯ ಅರ್ಥಪೂರ್ಣ ಕಾರ್ಯಕ್ರಮಗಳಿಗೆ ಮುಂದಿನ ದಿನಗಳಲ್ಲಿ ಸಹಕರಿಸುವ ಭರವಸೆ ನೀಡಿ, ಫಲಾನುಭವಿಗಳಿಗೆ ವಿಶ್ವಾಸ ಬದುಕಿಗಾಗಿ ಧೈರ್ಯ ತುಂಬಿದರು.

ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಮ್ಯಾನೆಜಿಂಗ್ ಡೈರೆಕ್ಟರ್ ಕೆ. ಎನ್ ಜನಾರ್ಧನ್ ಇವರು ಸೇವಾಭಾರತಿಯಿಂದ ನೀಡಿದ ನೀರಿನ ಹಾಸಿಗೆಗೆ ಧನ ಸಹಾಯದ ಚೆಕ್ಕನ್ನು ಫಲಾನುಭವಿಗೆ ಹಸ್ತಾಂತರಿಸಿ, ಸೇವಾಭಾರತಿ ಸಂಸ್ಥೆಯು ದಿವ್ಯಾಂಗರ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರ ಹಾಗೂ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರು ಇಂತಹ ಸಂಸ್ಥೆಯ ಪ್ರಯೋಜನ ಪಡೆದು ಸಮಾಜದಲ್ಲಿ ಸ್ವಾವಲಂಬಿ ಜೀವನ ನಡೆಸುವಲ್ಲಿ ಸಫಲರಾಗಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಪ್ರಬಂಧಕರುಗಳಾದ ವಿನಾಯಕ ಪ್ರಭು, ಪ್ರವೀಣ್, ಪದ್ಮಪ್ರಸಾದ್ ಆಳ್ವ, ಅವಿನಾಶ್ ಕೆ ಹಾಗೂ ಸೇವಾಧಾಮದ ಸಂಚಾಲಕರಾದ ಪುರಂದರ ರಾವ್, ಸಂಸ್ಥೆಯ ಅಧ್ಯಕ್ಷರಾದ ಕೆ ವಿನಾಯಕ ರಾವ್ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಸಂಸ್ಥೆಯ ಸೀನಿಯರ್ ಮ್ಯಾನೇಜರ್ ಚರಣ್ ಕುಮಾರ್ ಎಂ ಇವರು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಕೆ ಪುರಂದರ ರಾವ್ ಧನ್ಯವಾದ ವಿತ್ತರು.

Related posts

ಬೆಳ್ತಂಗಡಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆ: ಎಚ್ಚರ ವಹಿಸುವಂತೆ ಶಾಸಕ ಹರೀಶ್ ಪೂಂಜ‌ ಮನವಿ: ತುರ್ತು ಸಂದರ್ಭಗಳಲ್ಲಿ‌ ಸಹಾಯವಾಣಿ ಸಂಪರ್ಕಿಸಲು ಸೂಚನೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya

ಉಜಿರೆ ರಬ್ಬರ್ ಸೊಸೈಟಿಗೆ ಅಪೋಲೋ ಗೋಲ್ಡ್ ಪಾರ್ಟ್ನರ್ ಅವಾರ್ಡ್

Suddi Udaya

ಕರಂಬಾರು ಗುತ್ತು ಸುಮಿತ್ರ ಹೆಗ್ಡೆಯವರ ಅಡಿಕೆ ತೋಟಕ್ಕೆ ಸಿಡಿಲು ಬಡಿದು ಹಾನಿ

Suddi Udaya

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya
error: Content is protected !!