July 26, 2026
ಜಿಲ್ಲಾ ಸುದ್ದಿ

ರಾಜ್ಯ ಪ್ರಶಸ್ತಿ ಗೆ ಪತ್ರಕರ್ತ ಪ್ರದೀಪ್ ಮರೋಡಿ ಆಯ್ಕೆ

ಬೆಳ್ತಂಗಡಿ: ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡಲಾಗುವ ಪ್ರತಿಷ್ಠಿತ ‘ಮೈಸೂರು ದಿಗಂತ’ರಾಜ್ಯ ಪ್ರಶಸ್ತಿಗೆ ‘ಪ್ರಜಾವಾಣಿ’ ದಿನಪತ್ರಿಕೆಯ ಪತ್ರಕರ್ತ ಪ್ರದೀಶ್‌ ಮರೋಡಿ ಆಯ್ಕೆಯಾಗಿದ್ದಾರೆ.

ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರಾದ ಸದಾಶಿವ ಶೆಣೈ ಕೆ. ಅವರ ಅಧ್ಯಕ್ಷತೆಯಲ್ಲಿ ನಡೆದ ಸರ್ವ ಸದಸ್ಯರ ಸಭೆಯಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಸಾಧನೆ ಮಾಡಿರುವವರನ್ನು ಪರಿಗಣಿಸಿ ನಾಲ್ಕು ವರ್ಷಗಳ (2019, 2020, 2021 ಮತ್ತು 2022) ರಾಜ್ಯದ ವಿವಿಧ ಪತ್ರಕರ್ತರನ್ನು ಮಾಧ್ಯಮ ವಾರ್ಷಿಕ ಪ್ರಶಸ್ತಿ ಮತ್ತು ದತ್ತಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಪ್ರಶಸ್ತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇತರ ಸಚಿವರು ಹಾಗೂ ಗಣ್ಯರನ್ನು ಆಹ್ವಾನಿಸಿ ಶೀಘ್ರದಲ್ಲೇ ಸಾಧಕರಿಗೆ ಪ್ರದಾನ ಮಾಡಲಾಗುತ್ತದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷ ಸದಾಶಿವ ಶೆಣೈ ಕೆ. ಅವರು ತಿಳಿಸಿದ್ದಾರೆ.

ಅತ್ಯುತ್ತಮ ಮಾನವೀಯ ಸಮಸ್ಯೆಯ ಲೇಖನಕ್ಕೆ ನೀಡಲಾಗುವ 2020ನೇ ಸಾಲಿನ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಗೆ ಬೆಳ್ತಂಗಡಿ ತಾಲ್ಲೂಕಿನ ಮರೋಡಿ ಗ್ರಾಮದ ಹಾರೊದ್ದು ನಿವಾಸಿ ಪ್ರದೀಶ್‌ ಮರೋಡಿ ಆಯ್ಕೆಯಾಗಿದ್ದಾರೆ.

2020ರ ಜೂನ್‌ ತಿಂಗಳಲ್ಲಿ ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ‘ಕೇಳುತ್ತಿಲ್ಲ ಮಲೆಮಕ್ಕಳ ಅಳಲು’ ಲೇಖನವು ಈ ಪ್ರಶಸ್ತಿಗೆ ಆಯ್ಕೆಯಾಗಿದೆ. ಮೈಸೂರು ದಿಗಂತ ಪತ್ರಿಕೆ ಸ್ಥಾಪಿಸಿರುವ ‘ಮೈಸೂರು ದಿಗಂತ’ ದತ್ತಿ ಪ್ರಶಸ್ತಿಯು ₹ 10,000 ನಗದು ಬಹುಮಾನ, ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

ಮಾಧ್ಯಮ ಕ್ಷೇತ್ರದಲ್ಲಿ ಒಂದೂವರೆ ದಶಕದಿಂದ ಕರ್ತವ್ಯ ನಿರ್ವಹಿಸುತ್ತಿರುವ ಪ್ರದೀಶ್‌ ಮರೋಡಿ ಅವರು ಬೆಳ್ತಂಗಡಿಯ ಸುದ್ದಿಬಿಡುಗಡೆ ವರದಿಗಾರರಾಗಿ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ಕೆಲ ವರ್ಷ ಟಿವಿ ಮಾಧ್ಯಮದಲ್ಲಿ ಕಾರ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. 2013ರಿಂದ ಪ್ರಜಾವಾಣಿ ಪತ್ರಿಕೆಯಲ್ಲಿ ಮೈಸೂರಿನಲ್ಲಿ, ಪ್ರಸ್ತುತ ಮಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ನೀಡಲಾಗುವ 2020ನೇ ಸಾಲಿನ ಪ್ರತಿಷ್ಠಿತ ‘ಪ.ಗೋ. ಪ್ರಶಸ್ತಿ’ಗೂ ಭಾಜನರಾಗಿದ್ದರು.

Related posts

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಅರಣ್ಯ ಸಚಿವರ ಆದೇಶ ಇದೆ ಎಂದು ಹೇಳಿಕೊಂಡು ಬಂದ ಅರಣ್ಯ ಇಲಾಖಾಧಿಕಾರಿಗಳು: ಕಳೆಂಜ ಲೋಲಾಕ್ಷ ಮನೆ ತೆರವುಗೊಳಿಸಲು ಮತ್ತೆ ಮುಂದಾದ ಅರಣ್ಯ ಇಲಾಖೆ: ಸ್ಥಳಕ್ಕೆ ಆಗಮಿಸಿದ ಜಿಲ್ಲೆಯ ಬಿಜೆಪಿಯ ಶಾಸಕರುಗಳಿಂದ ತೀವ್ರ ವಿರೋಧ: ಎಂ.ಎಲ್. ಸಿ ಯವರನ್ನು ದೂಡಿದ ಅಧಿಕಾರಿ – ಸಳೀಯ ನಾಗರಿಕರ ಪ್ರತಿಭಟನೆ – ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ: ಸಚಿವರಿಂದ ಬಡವರ ಮನೆ ತೆರವಿಗೆ ಹುನ್ನಾರ: ಹರೀಶ್ ಪೂಂಜ ಆರೋಪ

Suddi Udaya

ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನ | ಬೆಳ್ತಂಗಡಯ ಇಬ್ಬರು ಮಂಗಳೂರು ಸಿಸಿಬಿ ಬಲೆಗೆ ರೂ. 3.2 ಕೋಟಿ ಮೌಲ್ಯದ ಅಂಬರ್ ಗ್ರೀಸ್ ವಶಕ್ಕೆ

Suddi Udaya

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್

Suddi Udaya

ನೆರಿಯ ಆಲಂಗಾಯಿಗೆ ರೂ.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ವಾಲ್ಮೀಕಿ ಆಶ್ರಮ ಶಾಲೆಗೆ ಶಿಲಾನ್ಯಾಸ

Suddi Udaya

ಮಂಡ್ಯದಲ್ಲಿ ನಡೆದ ಕೊಲೆ ಪ್ರಕರಣ: ಆರೋಪಿ ಜಯಚಂದ್ರ ಬಂಧನ

Suddi Udaya
error: Content is protected !!