April 7, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ‌ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.

ಭಜನೆಯೊಂದಿಗೆ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು ಕೂಡ ನೀಡುತ್ತ ಬರುತ್ತಿರುವ ತಂಡವು ತನ್ನ 5 ನೇ ಸೇವಾ ಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಡೆಂಗಾಲು ನೋಣಯ್ಯ ಪೂಜಾರಿಯವರಿಗೆ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರು ಕಾಲಿನ ಮಣಿಗಂಟಿನ ಸಮಸ್ಯೆಯನ್ನು ಎದುರಿಸುತ್ತಿದ್ದು ನಡೆದಾಡಲು ಕಷ್ಟಪಡುತ್ತಿದ್ದಾರೆ. ಅವರಿಗೆ ವಾಕ್ ಚಯರ್ ಹಾಗೂ ಪೂನಾ ಉದ್ಯಮಿ ಯೋಗೀಶ್ ಪೂಜಾರಿ ಕಾಪಿನಡ್ಕ ಸಹಾಯಾರ್ಥ ಅಕ್ಕಿ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು. ಇವರ ಮಗಳು ಸುರಕ್ಷಾ ರವರು ಭಜನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಭಜನಾ ತಂಡದ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ, ಬಳಂಜ ಬಿಲ್ಲವ ಸಂಘದ ನಿರ್ದೇಶಕರಾದ ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸದಸ್ಯ ಪ್ರಣಾಮ್ ಶೆಟ್ಟಿ, ಹಿರಿಯರಾದ ನಾರಾಯಣ ಪೂಜಾರಿ ಮಜ್ಜೇನಿ,ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya

“ನಮ್ಮ ಜವನೆರ್ ವಾಟ್ಸಪ್ ಗ್ರೂಪ್ ಅಳದಂಗಡಿ” ಹಾಗೂ “ಪಬ್ ಜಿ “ಗ್ರೂಪಿನ ಸದಸ್ಯರಿಂದ ಸಹಾಯಧನ ಹಸ್ತಾಂತರ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ವಿರುದ್ಧ ಸಮಾಜಘಾತುಕ ಶಕ್ತಿಗಳಿಂದ ಸುಳ್ಳು ಸುದ್ದಿ ಹಾಗೂ ಅಪಪ್ರಚಾರಕ್ಕೆಜಿಲ್ಲಾ ಜನಜಾಗೃತಿ ವೇದಿಕೆ ಖಂಡನೆ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!