25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ‌ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.

ಭಜನೆಯೊಂದಿಗೆ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು ಕೂಡ ನೀಡುತ್ತ ಬರುತ್ತಿರುವ ತಂಡವು ತನ್ನ 5 ನೇ ಸೇವಾ ಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಡೆಂಗಾಲು ನೋಣಯ್ಯ ಪೂಜಾರಿಯವರಿಗೆ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರು ಕಾಲಿನ ಮಣಿಗಂಟಿನ ಸಮಸ್ಯೆಯನ್ನು ಎದುರಿಸುತ್ತಿದ್ದು ನಡೆದಾಡಲು ಕಷ್ಟಪಡುತ್ತಿದ್ದಾರೆ. ಅವರಿಗೆ ವಾಕ್ ಚಯರ್ ಹಾಗೂ ಪೂನಾ ಉದ್ಯಮಿ ಯೋಗೀಶ್ ಪೂಜಾರಿ ಕಾಪಿನಡ್ಕ ಸಹಾಯಾರ್ಥ ಅಕ್ಕಿ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು. ಇವರ ಮಗಳು ಸುರಕ್ಷಾ ರವರು ಭಜನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಭಜನಾ ತಂಡದ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ, ಬಳಂಜ ಬಿಲ್ಲವ ಸಂಘದ ನಿರ್ದೇಶಕರಾದ ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸದಸ್ಯ ಪ್ರಣಾಮ್ ಶೆಟ್ಟಿ, ಹಿರಿಯರಾದ ನಾರಾಯಣ ಪೂಜಾರಿ ಮಜ್ಜೇನಿ,ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಹಳ್ಳಿಂಗೇರಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬಂದಾರು: ಒಟೆಚ್ಚಾರ್ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಕು| ಅದಿತಿ ಮುಗೆರೋಡಿ “ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್” ನಲ್ಲಿ ದಾಖಲೆ”

Suddi Udaya

ನಾರಾವಿ ಸಂತ ಅಂತೋನಿ ಪ.ಪೂ. ಕಾಲೇಜಿನಲ್ಲಿ ನಶಾಮುಕ್ತ ಭಾರತ -ಪ್ರತಿಜ್ಞಾ ಸ್ವೀಕಾರ

Suddi Udaya

ಕನ್ಯಾಡಿ ಸೇವಾಭಾರತಿಯಿಂದ ಸಂಸದ ಕ್ಯಾ| ಬ್ರಿಜೇಶ್ ಚೌಟರ ಭೇಟಿ

Suddi Udaya
error: Content is protected !!