ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ‌ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.

ಭಜನೆಯೊಂದಿಗೆ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು ಕೂಡ ನೀಡುತ್ತ ಬರುತ್ತಿರುವ ತಂಡವು ತನ್ನ 5 ನೇ ಸೇವಾ ಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಡೆಂಗಾಲು ನೋಣಯ್ಯ ಪೂಜಾರಿಯವರಿಗೆ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರು ಕಾಲಿನ ಮಣಿಗಂಟಿನ ಸಮಸ್ಯೆಯನ್ನು ಎದುರಿಸುತ್ತಿದ್ದು ನಡೆದಾಡಲು ಕಷ್ಟಪಡುತ್ತಿದ್ದಾರೆ. ಅವರಿಗೆ ವಾಕ್ ಚಯರ್ ಹಾಗೂ ಪೂನಾ ಉದ್ಯಮಿ ಯೋಗೀಶ್ ಪೂಜಾರಿ ಕಾಪಿನಡ್ಕ ಸಹಾಯಾರ್ಥ ಅಕ್ಕಿ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು. ಇವರ ಮಗಳು ಸುರಕ್ಷಾ ರವರು ಭಜನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಭಜನಾ ತಂಡದ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ, ಬಳಂಜ ಬಿಲ್ಲವ ಸಂಘದ ನಿರ್ದೇಶಕರಾದ ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸದಸ್ಯ ಪ್ರಣಾಮ್ ಶೆಟ್ಟಿ, ಹಿರಿಯರಾದ ನಾರಾಯಣ ಪೂಜಾರಿ ಮಜ್ಜೇನಿ,ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪಿ.ಎಂ.ಶ್ರೀ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಹಾಗೂ ಬೆಂಕಿ ಇಲ್ಲದ ಅಡುಗೆ ಕಾರ್ಯಕ್ರಮ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಮುಂದಿನ ಆದೇಶದವರೆಗೆ ನಿಷೇಧ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಹಿಂದೂ ಧಾರ್ಮಿಕ ಶ್ರದ್ದಾ ಕೇಂದ್ರದ ವಿರುದ್ದ ನಡೆಯುತ್ತಿರುವ ಷಡ್ಯಂತ್ರವನ್ನು ಖಂಡಿಸಿ; ಬಿಜೆಪಿ ರಾಜ್ಯಾಧ್ಯಕ್ಷ ಬಿ‌.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ಬೃಹತ್ ಸಮಾವೇಶ

Suddi Udaya

ಮಿತ್ತಬಾಗಿಲು ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಪುದುವೆಟ್ಟು: ಮಡ್ಯದಿಂದ ಹೊಳೆಯವರೆಗಿನ ಪಂಚಾಯತ್ ರಸ್ತೆಯ ಅತಿಕ್ರಮಣ: ಜೆಸಿಬಿ ಮೂಲಕ ಪೊಲೀಸ್ ರಕ್ಷಣೆಯೊಂದಿಗೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ

Suddi Udaya

ಟೇಬಲ್ ಟೆನಿಸ್ ಪಂದ್ಯಾಟ: ಪೆರಿಂಜೆ ಎಸ್.ಡಿ.ಎಮ್ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!