26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ‌ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.

ಭಜನೆಯೊಂದಿಗೆ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು ಕೂಡ ನೀಡುತ್ತ ಬರುತ್ತಿರುವ ತಂಡವು ತನ್ನ 5 ನೇ ಸೇವಾ ಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಡೆಂಗಾಲು ನೋಣಯ್ಯ ಪೂಜಾರಿಯವರಿಗೆ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರು ಕಾಲಿನ ಮಣಿಗಂಟಿನ ಸಮಸ್ಯೆಯನ್ನು ಎದುರಿಸುತ್ತಿದ್ದು ನಡೆದಾಡಲು ಕಷ್ಟಪಡುತ್ತಿದ್ದಾರೆ. ಅವರಿಗೆ ವಾಕ್ ಚಯರ್ ಹಾಗೂ ಪೂನಾ ಉದ್ಯಮಿ ಯೋಗೀಶ್ ಪೂಜಾರಿ ಕಾಪಿನಡ್ಕ ಸಹಾಯಾರ್ಥ ಅಕ್ಕಿ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು. ಇವರ ಮಗಳು ಸುರಕ್ಷಾ ರವರು ಭಜನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಭಜನಾ ತಂಡದ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ, ಬಳಂಜ ಬಿಲ್ಲವ ಸಂಘದ ನಿರ್ದೇಶಕರಾದ ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸದಸ್ಯ ಪ್ರಣಾಮ್ ಶೆಟ್ಟಿ, ಹಿರಿಯರಾದ ನಾರಾಯಣ ಪೂಜಾರಿ ಮಜ್ಜೇನಿ,ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಸ್ಕ್ರೈಬ್ ಮೈಂಡ್ಸ್ ಮತ್ತು ಮೀಡಿಯಾ ಕಾರ್ಯಕ್ರಮದಲ್ಲಿ ಹತ್ಯಡ್ಕದ ವಿವೇಕಾನಂದ ರಿಗೆ ಟಾಪ್ 10 ನಾಯಕ ಪ್ರಶಸ್ತಿ

Suddi Udaya

ನಿಡಿಗಲ್: ನಡ್ವಾಲ್ ಸಿರಿಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಉಜಿರೆ ವಲಯದ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಶಿಶಿಲ ಸ.ಉ.ಹಿ.ಪ್ರಾ. ಶಾಲೆಯ ಮರು ನಿರ್ಮಾಣ ಕಾರ್ಯ ನಡೆಯುತ್ತಿದ್ದು ಸ್ಥಳಕ್ಕೆ ಪುತ್ತೂರು ಮಾಸ್ಟರ್ ಪ್ಲಾನರಿಯವರಿಂದ ಭೇಟಿ

Suddi Udaya

ಕುವೆಟ್ಟು: ಮಾರಿಯಮ್ಮ ದೇವಿಯ ನೂತನ ಕಟ್ಟೆ ನಿರ್ಮಿಸಲು ಭೂಮಿ ಪೂಜೆ

Suddi Udaya
error: Content is protected !!