September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ ಶ್ರೀ ಗುರುಪೂಜೆ ಅಂಗವಾಗಿ ಕ್ರೀಡಾಕೂಟವು ಫೆ12 ರಂದು ಅಟ್ಲಾಜೆ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಬಳಂಜ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಸಾಂತಪ್ಪ ಸುವರ್ಣ ದೀಪ ಬೆಳಗಿಸುವುದರ ಮೂಲಕ ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಯುವ ಉದ್ಯಮಿ ಪ್ರಶಾಂತ್ ಕೋಟ್ಯಾನ್ ದರ್ಖಾಸು,ಸಂಘದ ಮಾಜಿ ಅಧ್ಯಕ್ಷರಾದ ಸುರೇಶ್ ಪುಜಾರಿ ಜೈಮಾತ, ದಿನೇಶ್ ಕೋಟ್ಯಾನ್ ಕುದ್ರೋಟ್ಟು,ಅಟ್ಲಾಜೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂದೇಶ್ ಪೆರಾಜೆ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ ಸ್ವಾಗತಿಸಿದರು. ಸದಸ್ಯ ಚಂದ್ರಹಾಸ ಬಳಂಜ ನಿರೂಪಿಸಿದರು. ಉಪಾಧ್ಯಕ್ಷ ಯತೀಶ್ ವೈ.ಎಲ್ ವಂದಿಸಿದರು.
ಯುವಕರಿಗೆ ,ಯುವತಿಯರಿಗೆ, ಮಕ್ಕಳಿಗೆ ವಿವಿಧ ಕ್ರೀಡಾಕೂಟಗಳು, ಫನ್ನಿ ಗೇಮ್ಸ್ ನಡೆಯಿತು.

Related posts

ನಾಲ್ಕೂರು: ಸೂಳಬೆಟ್ಟು ನಿವಾಸಿ ಪ್ರತಿಭಾ ಜೋಶಿ ನಿಧನ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆ ಹಳೆ ವಿದ್ಯಾರ್ಥಿ ಸಂಘ ಅಧ್ಯಕ್ಷರಾಗಿ ವಾಮನ ತಾಮ್ಹ ನ್ ಕರ್ ಆಯ್ಕೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಉಜಿರೆಯಲ್ಲಿ ಕೇರಳ ಸಂಪ್ರದಾಯ ವಿಷು ಕಣಿ ಉತ್ಸವ, ಸಾವಿರಾರು ಮಂದಿ ಭಾಗಿ

Suddi Udaya

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya

ಎಸ್.ಡಿ.ಎಮ್ ಮಹಿಳಾ ಐ.ಟಿ.ಐ ಯಲ್ಲಿ ಎನ್.ಸಿ.ವಿ.ಟಿ ಮಾನ್ಯತೆ ಪಡೆದ ಫ್ಯಾಶನ್ ಡಿಸೈನ್ ಮತ್ತು ಟೆಕ್ನಾಲಜಿ ವೃತ್ತಿ ಆರಂಭ

Suddi Udaya
error: Content is protected !!