25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಕೂಟ ಮಹಾ ಜಗತ್ತು ಬೆಳ್ತಂಗಡಿ ಅಂಗ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮತ್ತು ಕ್ಯಾಲೆಂಡರ್ ಬಿಡುಗಡೆ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಬೈಕ್ ಢಿಕ್ಕಿಯಾಗಿ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಪಾದಚಾರಿ ಚಿಕಿತ್ಸೆ ಫಲಿಸದೆ ಸಾವು

Suddi Udaya

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಚಪ್ಪರ ಮೂಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಅಳದಂಗಡಿ: ಕೆದ್ದು ನಿವಾಸಿ ಸತೀಶ್ ಪೂಜಾರಿ ನಿಧನ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya
error: Content is protected !!