23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಲಯನ್ಸ್ ಕ್ಲಬ್ ನಲ್ಲಿ ದೀಪಾವಳಿ ಆಚರಣೆ

Suddi Udaya

ಜಿಲ್ಲಾ ಮಟ್ಟದ ಸಾಹಿತ್ಯಿಕ ಹಾಗೂ ಸಾಂಸ್ಕೃತಿಕ ಸ್ಪರ್ಧೆ: ಉಜಿರೆ ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿಗೆ ಹಲವಾರು ಪ್ರಶಸ್ತಿ

Suddi Udaya
error: Content is protected !!