July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಉಳ್ತೂರು: ದರ್ಸ್ ವಾರ್ಷಿಕ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya

ಕೋರ್ಟ್ ಆದೇಶ ಉಲ್ಲಂಘಿಸಿ ಯಾವುದೇ ಹೇಳಿಕೆ ನೀಡದಂತೆ ಮಹೇಶ್ ಶೆಟ್ಟಿಯವರಿಗೆ ಎಚ್ಚರಿಕೆ: ಪ್ರತಿಬಂಧಕಾದೇಶ ಉಲ್ಲಂಘನೆ ಆಗದಂತೆ ನೋಡಿಕೊಳ್ಳಲು ಸರಕಾರ ಹಾಗೂ ಗೃಹ ಇಲಾಖೆಗೆ, ಉನ್ನತ ಪೊಲೀಸ್ ಅಧಿಕಾರಿಗಳಿಗೆ ಹೈಕೋರ್ಟ್ ನಿರ್ದೇಶನ

Suddi Udaya

ಹದಗೆಟ್ಟಿರುವ ಮಲ್ಲೊಟ್ಟು – ಹರ್ಪಳ ರಸ್ತೆ: ದುರಸ್ತಿಗೊಳಿಸುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆಗೆ ನಾರ್ತ್ ಕೆರೊಲಿನಾ ದಂತ ವೈದ್ಯಕೀಯ ವಿದ್ಯಾರ್ಥಿ ತಂಡ ಭೇಟಿ

Suddi Udaya
error: Content is protected !!