25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯಿಂದ ವೈದ್ಯಕೀಯ ನೆರವು

ಬಳಂಜ: ಕಳೆದ ಒಂದೂವರೆ ವರ್ಷದಿಂದ ನೂರಾರು ಕಡೆಗಳಲ್ಲಿ ಕುಣಿತಾ ಭಜನೆ ಪ್ರದರ್ಶನೆ ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾದ ಬ್ರಹ್ಮಶ್ರಿ ಕುಣಿತಾ ಭಜನಾ ಮಂಡಳಿಯು ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ‌ ಇವರ ನೇತೃತ್ವದಲ್ಲಿ ಮುನ್ನಡೆಯುತ್ತಿದೆ.

ಭಜನೆಯೊಂದಿಗೆ ಹಲವಾರು ಅಶಕ್ತ ಕುಟುಂಬಗಳಿಗೆ ನೆರವು ಕೂಡ ನೀಡುತ್ತ ಬರುತ್ತಿರುವ ತಂಡವು ತನ್ನ 5 ನೇ ಸೇವಾ ಯೋಜನೆಯನ್ನು ಅನಾರೋಗ್ಯದಿಂದ ಬಳಲುತ್ತಿರುವ ಕಡೆಂಗಾಲು ನೋಣಯ್ಯ ಪೂಜಾರಿಯವರಿಗೆ ಹಸ್ತಾಂತರಿಸಲಾಯಿತು.

ನೋಣಯ್ಯ ಪೂಜಾರಿಯವರು ಕಾಲಿನ ಮಣಿಗಂಟಿನ ಸಮಸ್ಯೆಯನ್ನು ಎದುರಿಸುತ್ತಿದ್ದು ನಡೆದಾಡಲು ಕಷ್ಟಪಡುತ್ತಿದ್ದಾರೆ. ಅವರಿಗೆ ವಾಕ್ ಚಯರ್ ಹಾಗೂ ಪೂನಾ ಉದ್ಯಮಿ ಯೋಗೀಶ್ ಪೂಜಾರಿ ಕಾಪಿನಡ್ಕ ಸಹಾಯಾರ್ಥ ಅಕ್ಕಿ ವಿತರಿಸಿ ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯಲಾಯಿತು. ಇವರ ಮಗಳು ಸುರಕ್ಷಾ ರವರು ಭಜನಾ ತಂಡದ ಸದಸ್ಯರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಈ ಸಂದರ್ಭದಲ್ಲಿ ಬಳಂಜ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಮಿತಿ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್,ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ, ಭಜನಾ ತಂಡದ ಪ್ರಧಾನ ಸಂಚಾಲಕ ಹರೀಶ್ ವೈ ಚಂದ್ರಮ, ಬಳಂಜ ಬಿಲ್ಲವ ಸಂಘದ ನಿರ್ದೇಶಕರಾದ ಜಗದೀಶ್ ಪೂಜಾರಿ ಬಳ್ಳಿದಡ್ಡ,ಯೋಗೀಶ್ ಪೂಜಾರಿ ಕೊಂಗುಳ,ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸದಸ್ಯ ಪ್ರಣಾಮ್ ಶೆಟ್ಟಿ, ಹಿರಿಯರಾದ ನಾರಾಯಣ ಪೂಜಾರಿ ಮಜ್ಜೇನಿ,ಭಜನಾ ಮಂಡಳಿ ಅಧ್ಯಕ್ಷೆ ರೂಪಾ ಶೆಟ್ಟಿ ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಸೆ 28 : ಧರ್ಮಸ್ಥಳದಲ್ಲಿ ತಾ| ಮಟ್ಟದ ಸತ್ಯದರ್ಶನ ಸಮಾವೇಶ, ಮಹಾ ಚಂಡಿಕಾ ಯಾಗ; ಸಮಾಲೋಚನಾ ಸಭೆ

Suddi Udaya

ತಿಮರೋಡಿ ಮನೆಗೆ ಮೂರನೇ ಅಂತಿಮ ನೋಟಿಸ್ ಜಾರಿ ಮಾಡಿದ ಬೆಳ್ತಂಗಡಿ ಪೊಲೀಸರು

Suddi Udaya

ಉಜಿರೆ: ಮಾಚಾರು ನಿವಾಸಿ ರಿಕ್ಷಾ ಚಾಲಕ ಸುಧಾಕರ ನಾಪತ್ತೆ

Suddi Udaya

ನೆರಿಯದಲ್ಲಿ ಬಿಜೆಪಿಯ ಬೃಹತ್‌ ಸಾರ್ವಜನಿಕ ಪ್ರಚಾರ ಸಭೆ

Suddi Udaya

ಶಿಶಿಲ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಮನೆಯ ಮೇಲ್ಛಾವಣಿ ದುರಸ್ತಿ

Suddi Udaya
error: Content is protected !!