30.7 C
ಪುತ್ತೂರು, ಬೆಳ್ತಂಗಡಿ
May 17, 2025
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ ಶ್ರೀ ಗುರುಪೂಜೆ ಅಂಗವಾಗಿ ಕ್ರೀಡಾಕೂಟವು ಫೆ12 ರಂದು ಅಟ್ಲಾಜೆ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಬಳಂಜ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಸಾಂತಪ್ಪ ಸುವರ್ಣ ದೀಪ ಬೆಳಗಿಸುವುದರ ಮೂಲಕ ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಯುವ ಉದ್ಯಮಿ ಪ್ರಶಾಂತ್ ಕೋಟ್ಯಾನ್ ದರ್ಖಾಸು,ಸಂಘದ ಮಾಜಿ ಅಧ್ಯಕ್ಷರಾದ ಸುರೇಶ್ ಪುಜಾರಿ ಜೈಮಾತ, ದಿನೇಶ್ ಕೋಟ್ಯಾನ್ ಕುದ್ರೋಟ್ಟು,ಅಟ್ಲಾಜೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂದೇಶ್ ಪೆರಾಜೆ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ ಸ್ವಾಗತಿಸಿದರು. ಸದಸ್ಯ ಚಂದ್ರಹಾಸ ಬಳಂಜ ನಿರೂಪಿಸಿದರು. ಉಪಾಧ್ಯಕ್ಷ ಯತೀಶ್ ವೈ.ಎಲ್ ವಂದಿಸಿದರು.
ಯುವಕರಿಗೆ ,ಯುವತಿಯರಿಗೆ, ಮಕ್ಕಳಿಗೆ ವಿವಿಧ ಕ್ರೀಡಾಕೂಟಗಳು, ಫನ್ನಿ ಗೇಮ್ಸ್ ನಡೆಯಿತು.

Related posts

ಮೂಲ್ಕಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದಿಂದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಜಯಾನಂದ ಪೂಜಾರಿ ಲಾಯಿಲರವರಿಗೆ ಸನ್ಮಾನ

Suddi Udaya

ಡಿ.12: ವಿದ್ಯುತ್ ನಿಲುಗಡೆ

Suddi Udaya

ಕೊಕ್ಕಡ: ತಲೆಗೆ ಮರಬಿದ್ದು ಮಹಿಳೆಯ ಧಾರುಣ ಸಾವು:

Suddi Udaya

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಟೈಲರ್ ಬಿ. ಕೃಷ್ಣ ಮಡಿವಾಳ ನಿಧನ

Suddi Udaya

ಆಕ್ಸಿಸ್ ಮ್ಯಾಕ್ಸ್ ಲೈಫ್ ಇನ್ಶುರೆನ್ಸ್ ಕಂಪನಿಯ ವತಿಯಿಂದ ಸಿನಿಮಾ , ಧಾರವಾಹಿ , ರಂಗಭೂಮಿಯಲ್ಲಿ ವಿಶೇಷ ಸಾಧನೆಗೈದ ಪ್ರಕಾಶ್ ಸವಣಾಲು ರವರಿಗೆ ಕಲಾರತ್ನ ಪ್ರಶಸ್ತಿ

Suddi Udaya

ಕುಕ್ಕೇಡಿ: ಪಟಾಕಿ ಸ್ಫೋಟ ಪ್ರಕರಣ ಸ್ಥಳ ಮತ್ತು ಹಾನಿಗೊಳಗಾದ ಮನೆಗಳಿಗೆ ಬೆಳ್ತಂಗಡಿ ಧರ್ಮಾಧ್ಯಕ್ಷರ ಭೇಟಿ

Suddi Udaya
error: Content is protected !!