25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿಗೆ
ಸೇತುವೆ ಬೇಕೆಂಬುದು ಈ ಎರಡು ಗ್ರಾಮಗಳ‌ ಜನರ‌ ಹಲವು ವಷ೯ಗಳ ಬೇಡಿಕೆ. ಇದಕ್ಕಾಗಿ ಈ ಭಾಗದ‌ ಜನರು‌ ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಹಲವಾರು ಸರ್ಕಾರಗಳು ಬಂದು ಹೋದರೂ, ಇವರ ಬೇಡಿಕೆ ಈಡೆರಲಿಲ್ಲ. ಇದೀಗ ಹಲವು ವಷ೯ಗಳ ಬಳಿಕ ಗ್ರಾಮಸ್ಥರ ಕನಸು ನನಸಾಗುವ ಹಂತಕ್ಕೆ ಬಂದಿದೆ.


ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ನವಬೆಳ್ತಂಗಡಿ ನಿಮಾ೯ಣದ‌ ಕನಸುಗಾರ ಹರೀಶ್ ಪೂಂಜ ಅವರು ಸರ್ಕಾರದಿಂದ‌ ರೂ. 72 ಕೋಟಿ ಅನುದಾನ ಮಂಜೂರು ಮಾಡಿಸುವ‌ ಮೂಲಕ ನುಡಿದಂತೆ ನಡೆದು, ಎರಡು ಗ್ರಾಮಗಳ ಗ್ರಾಮಸ್ಥರ ಹಲವು ವಷ೯ಗಳ ಬೇಡಿಕೆಯನ್ನು ಈಡೇರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಈ ಯೋಜನೆಯಲ್ಲಿ ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿ ನೇತ್ರಾವತಿ ನದಿಗೆ ರೂ. 72 ಕೋಟಿ ವೆಚ್ಚದಲ್ಲಿ ಸಂಪರ್ಕ ಸೇತುವೆ
ಸಹಿತ ಕಿಂಡಿ ಅಣೆಕಟ್ಟು
ನಿರ್ಮಾಣವಾಗಲಿದೆ.
ಕೊಕ್ಕಡ ಹೋಬಳಿ ಕೇಂದ್ರ, ಕಣಿಯೂರು,ಬಂದಾರು,ಬೆಳಾಲು,ಮೊಗ್ರು ,ಇಳಂತಿಲ,ಬಾರ್ಯ,ತಣ್ಣಿರುಪಂತ ವ್ಯಾಪ್ತಿಯ ಜನರು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾದರೆ ಕೊಕ್ಕಡಕ್ಕೆ ಹೋಗಬೇಕು. ಮೈಪಾಲದಲ್ಲಿ ಸೇತುವೆ ಇಲ್ಲದ್ದರಿಂದ ಸುತ್ತು ಬಳಸಿ, ಮೂರ್ನಕು ಬಸ್ ಬದಲಾಯಿಸಿ ಹೋಗಬೇಕಾದ ಅನಿವಾರ್ಯತೆ ಇದೆ. ಆನೇಕ ವಷ೯ಗಳಿಂದ ಜನರು ಈ ‌ಸಮಸ್ಯೆಯನ್ನು ಎದುರಿಸುತ್ತಾ ಬರುತ್ತಿದ್ದಾರೆ. ಅಲ್ಲಿದೆ ಪುತ್ತೂರು, ಉಪ್ಪಿನಂಗಡಿ ಕಡೆಯ ಶಾಲಾ,‌ ಕಾಲೇಜು ಗಳಿಗೆ ಹೋಗುವ ವಿದ್ಯಾರ್ಥಿಗಳು, ಪುತ್ತೂರಿಗೆ ಅಗತ್ಯ ಕಾಯ೯ಗಳಿಗೆ‌ ಹೋಗಬೇಕಾದ ನಾಗರಿಕರು ನೆಲ್ಯಾಡಿ, ಅಥವಾ ಬೆಳ್ತಂಗಡಿ ಮೂಲಕ ಹೋಗಬೇಕಾಗಿದೆ. ಇದೀಗ ಮೈಪಾಲದಲ್ಲಿ ಸೇತುವೆ ಆಗುವುದರಿಂದ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. ಶಾಸಕರ ಪ್ರಯತ್ನದಿಂದ ಮೈಪಾಲಕ್ಕೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಮಂಜೂರಾತಿ ಆಗಿರುವುದು ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Related posts

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಜು.3 ರಂದು ಬೆಳ್ತಂಗಡಿ ರೋಟರಿ ಕ್ಲಬ್ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ: ಅಧ್ಯಕ್ಷ ಪೂರನ್ ವರ್ಮ ಮತ್ತು ತಂಡದ ಸಾಧನೆಗೆ ರೋಟರಿ ಕ್ಲಬ್ ಬೆಳ್ತಂಗಡಿಗೆ “ಡೈಮಂಡ್ ಕ್ಲಬ್ ಪ್ರಶಸ್ತಿ”ಯ ಗೌರವ: 2025-26 ನೇ ಸಾಲಿನ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ಉಜಿರೆ:ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃತಿಕ ಸಂಘದ ವತಿಯಿಂದ ‘ವೃಕ್ಷಾಬಂಧನ’ ಕಾರ್ಯಕ್ರಮ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಪಟ್ರಮೆ: ಮಿತ್ತಡ್ಕದಲ್ಲಿ ಸಂಜೀವ ಗೌಡ ರವರ ಮನೆಗೆ ಆಕಸ್ಮಿಕವಾಗಿ ಹತ್ತಿಕೊಂಡ ಬೆಂಕಿ: ಅಪಾರ ಹಾನಿ

Suddi Udaya
error: Content is protected !!