July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿಗೆ
ಸೇತುವೆ ಬೇಕೆಂಬುದು ಈ ಎರಡು ಗ್ರಾಮಗಳ‌ ಜನರ‌ ಹಲವು ವಷ೯ಗಳ ಬೇಡಿಕೆ. ಇದಕ್ಕಾಗಿ ಈ ಭಾಗದ‌ ಜನರು‌ ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಹಲವಾರು ಸರ್ಕಾರಗಳು ಬಂದು ಹೋದರೂ, ಇವರ ಬೇಡಿಕೆ ಈಡೆರಲಿಲ್ಲ. ಇದೀಗ ಹಲವು ವಷ೯ಗಳ ಬಳಿಕ ಗ್ರಾಮಸ್ಥರ ಕನಸು ನನಸಾಗುವ ಹಂತಕ್ಕೆ ಬಂದಿದೆ.


ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ನವಬೆಳ್ತಂಗಡಿ ನಿಮಾ೯ಣದ‌ ಕನಸುಗಾರ ಹರೀಶ್ ಪೂಂಜ ಅವರು ಸರ್ಕಾರದಿಂದ‌ ರೂ. 72 ಕೋಟಿ ಅನುದಾನ ಮಂಜೂರು ಮಾಡಿಸುವ‌ ಮೂಲಕ ನುಡಿದಂತೆ ನಡೆದು, ಎರಡು ಗ್ರಾಮಗಳ ಗ್ರಾಮಸ್ಥರ ಹಲವು ವಷ೯ಗಳ ಬೇಡಿಕೆಯನ್ನು ಈಡೇರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಈ ಯೋಜನೆಯಲ್ಲಿ ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿ ನೇತ್ರಾವತಿ ನದಿಗೆ ರೂ. 72 ಕೋಟಿ ವೆಚ್ಚದಲ್ಲಿ ಸಂಪರ್ಕ ಸೇತುವೆ
ಸಹಿತ ಕಿಂಡಿ ಅಣೆಕಟ್ಟು
ನಿರ್ಮಾಣವಾಗಲಿದೆ.
ಕೊಕ್ಕಡ ಹೋಬಳಿ ಕೇಂದ್ರ, ಕಣಿಯೂರು,ಬಂದಾರು,ಬೆಳಾಲು,ಮೊಗ್ರು ,ಇಳಂತಿಲ,ಬಾರ್ಯ,ತಣ್ಣಿರುಪಂತ ವ್ಯಾಪ್ತಿಯ ಜನರು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾದರೆ ಕೊಕ್ಕಡಕ್ಕೆ ಹೋಗಬೇಕು. ಮೈಪಾಲದಲ್ಲಿ ಸೇತುವೆ ಇಲ್ಲದ್ದರಿಂದ ಸುತ್ತು ಬಳಸಿ, ಮೂರ್ನಕು ಬಸ್ ಬದಲಾಯಿಸಿ ಹೋಗಬೇಕಾದ ಅನಿವಾರ್ಯತೆ ಇದೆ. ಆನೇಕ ವಷ೯ಗಳಿಂದ ಜನರು ಈ ‌ಸಮಸ್ಯೆಯನ್ನು ಎದುರಿಸುತ್ತಾ ಬರುತ್ತಿದ್ದಾರೆ. ಅಲ್ಲಿದೆ ಪುತ್ತೂರು, ಉಪ್ಪಿನಂಗಡಿ ಕಡೆಯ ಶಾಲಾ,‌ ಕಾಲೇಜು ಗಳಿಗೆ ಹೋಗುವ ವಿದ್ಯಾರ್ಥಿಗಳು, ಪುತ್ತೂರಿಗೆ ಅಗತ್ಯ ಕಾಯ೯ಗಳಿಗೆ‌ ಹೋಗಬೇಕಾದ ನಾಗರಿಕರು ನೆಲ್ಯಾಡಿ, ಅಥವಾ ಬೆಳ್ತಂಗಡಿ ಮೂಲಕ ಹೋಗಬೇಕಾಗಿದೆ. ಇದೀಗ ಮೈಪಾಲದಲ್ಲಿ ಸೇತುವೆ ಆಗುವುದರಿಂದ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. ಶಾಸಕರ ಪ್ರಯತ್ನದಿಂದ ಮೈಪಾಲಕ್ಕೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಮಂಜೂರಾತಿ ಆಗಿರುವುದು ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Related posts

ಮಹೇಶ್ ಶೆಟ್ಟಿ ತಿಮರೋಡಿಯವರಿಂದ ಜೈನ ಮತ್ತು ಹಿಂದೂ ಸಮುದಾಯಗಳ ನಡುವೆ ಅಶಾಂತಿಯನ್ನು ಪ್ರೇರೇಪಿಸುವ ಭಾಷಣ ಆರೋಪ: ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಉಜಿರೆಯ ಅಜಿತ್ ಹೆಗ್ಡೆಯವರಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ನಾಳ ಅಂಗನವಾಡಿ ಕೇಂದ್ರದಲ್ಲಿ ಸಂಭ್ರಮದ ಸ್ವಾತಂತ್ರ್ಯ

Suddi Udaya

ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಪ್ರಭಾರ ಕಾರ್ಯನಿರ್ವಹಣಾಧಿಕಾರಿಯಾಗಿ ಯೇಸುರಾಜ್ ನೇಮಕ

Suddi Udaya
error: Content is protected !!