September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya

ಕೋಳಿ ಅಂಕ ಅಪರಾಧವಾಗಿದ್ದು ಕಾನೂನು ಪಾಲಿಸುವಂತೆ ಪೊಲೀಸರಿಗೆ ಡೈರೆಕ್ಟರ್ ಜನರಲ್ ಆದೇಶ

Suddi Udaya

ನಾವೂರು: ಮುರ ಮುಹಿಯುದ್ದೀನ್ ಜುಮಾ ಮಸೀದಿಯಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya

ಜ.14-20: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ

Suddi Udaya
error: Content is protected !!