23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಬಳಂಜ: ಶ್ರೀಗುರುಪೂಜೆ ಪ್ರಯುಕ್ತ ಬಿಲ್ಲವ ಸಂಘದಿಂದ ಕ್ರೀಡಾಕೂಟ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ,ನಾಲ್ಕೂರು,ತೆಂಕಕಾರಂದೂರು ಇದರ ವತಿಯಿಂದ ನಡೆಯುವ ಶ್ರೀ ಗುರುಪೂಜೆ ಅಂಗವಾಗಿ ಕ್ರೀಡಾಕೂಟವು ಫೆ12 ರಂದು ಅಟ್ಲಾಜೆ ಮೈದಾನದಲ್ಲಿ ನಡೆಯಿತು.

ಕ್ರೀಡಾಕೂಟದ ಉದ್ಘಾಟನೆಯನ್ನು ಬಳಂಜ ಬಿಲ್ಲವ ಸಂಘದ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಸಾಂತಪ್ಪ ಸುವರ್ಣ ದೀಪ ಬೆಳಗಿಸುವುದರ ಮೂಲಕ ನೇರವೇರಿಸಿ ಶುಭಕೋರಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ವಹಿಸಿದ್ದರು.

ವೇದಿಕೆಯಲ್ಲಿ ಬಳಂಜ ಗ್ರಾ.ಪಂ ಮಾಜಿ ಉಪಾಧ್ಯಕ್ಷ ಸದಾನಂದ ಸಾಲಿಯಾನ್, ಯುವ ಉದ್ಯಮಿ ಪ್ರಶಾಂತ್ ಕೋಟ್ಯಾನ್ ದರ್ಖಾಸು,ಸಂಘದ ಮಾಜಿ ಅಧ್ಯಕ್ಷರಾದ ಸುರೇಶ್ ಪುಜಾರಿ ಜೈಮಾತ, ದಿನೇಶ್ ಕೋಟ್ಯಾನ್ ಕುದ್ರೋಟ್ಟು,ಅಟ್ಲಾಜೆ ಶಾಲಾಭಿವೃದ್ದಿ ಸಮಿತಿ ಅಧ್ಯಕ್ಷ ಸಂದೇಶ್ ಪೆರಾಜೆ,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಪ್ರವೀಣ್ ಕೋಟ್ಯಾನ್, ಕಾರ್ಯದರ್ಶಿ ಶರತ್ ಅಂಚನ್, ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಪುಷ್ಪಾ ಗೀರೀಶ್,ಕಾರ್ಯದರ್ಶಿ ಕಲಾವತಿ ಉಪಸ್ಥಿತರಿದ್ದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಂತೋಷ್ ಪಿ ಕೋಟ್ಯಾನ್ ಬಳಂಜ ಸ್ವಾಗತಿಸಿದರು. ಸದಸ್ಯ ಚಂದ್ರಹಾಸ ಬಳಂಜ ನಿರೂಪಿಸಿದರು. ಉಪಾಧ್ಯಕ್ಷ ಯತೀಶ್ ವೈ.ಎಲ್ ವಂದಿಸಿದರು.
ಯುವಕರಿಗೆ ,ಯುವತಿಯರಿಗೆ, ಮಕ್ಕಳಿಗೆ ವಿವಿಧ ಕ್ರೀಡಾಕೂಟಗಳು, ಫನ್ನಿ ಗೇಮ್ಸ್ ನಡೆಯಿತು.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಎಚ್ ಐ ವಿ ಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್, ಶ್ರೀ.ಧ.ಮಂ. ಶಿಕ್ಷಣ ಸಂಸ್ಥೆಗಳು ಹಾಗೂ ಇತರ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ದೇಲಂಪುರಿ ಶ್ರೀ ಮಹಾದೇವ ಮಹಾಗಣಪತಿ ದೇವಸ್ಥಾನದಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಕಿರು ನಾಟಕ ಸ್ಪರ್ಧೆ: ಬೆಳ್ತಂಗಡಿ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

Suddi Udaya

ನಿಡ್ಲೆ ಸರ್ಕಾರಿ ಪ್ರೌಢಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya
error: Content is protected !!