25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಮೈಪಾಲ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಸರಕಾರದಿಂದ ರೂ 72 ಕೋಟಿ ಅನುದಾನ

ಬೆಳ್ತಂಗಡಿ: ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿಗೆ
ಸೇತುವೆ ಬೇಕೆಂಬುದು ಈ ಎರಡು ಗ್ರಾಮಗಳ‌ ಜನರ‌ ಹಲವು ವಷ೯ಗಳ ಬೇಡಿಕೆ. ಇದಕ್ಕಾಗಿ ಈ ಭಾಗದ‌ ಜನರು‌ ಸಲ್ಲಿಸಿದ ಮನವಿಗಳಿಗೆ ಲೆಕ್ಕವಿಲ್ಲ. ಹಲವಾರು ಸರ್ಕಾರಗಳು ಬಂದು ಹೋದರೂ, ಇವರ ಬೇಡಿಕೆ ಈಡೆರಲಿಲ್ಲ. ಇದೀಗ ಹಲವು ವಷ೯ಗಳ ಬಳಿಕ ಗ್ರಾಮಸ್ಥರ ಕನಸು ನನಸಾಗುವ ಹಂತಕ್ಕೆ ಬಂದಿದೆ.


ಬೆಳ್ತಂಗಡಿ ತಾಲೂಕಿನ ಜನಪ್ರಿಯ ಶಾಸಕ ಹಾಗೂ ನವಬೆಳ್ತಂಗಡಿ ನಿಮಾ೯ಣದ‌ ಕನಸುಗಾರ ಹರೀಶ್ ಪೂಂಜ ಅವರು ಸರ್ಕಾರದಿಂದ‌ ರೂ. 72 ಕೋಟಿ ಅನುದಾನ ಮಂಜೂರು ಮಾಡಿಸುವ‌ ಮೂಲಕ ನುಡಿದಂತೆ ನಡೆದು, ಎರಡು ಗ್ರಾಮಗಳ ಗ್ರಾಮಸ್ಥರ ಹಲವು ವಷ೯ಗಳ ಬೇಡಿಕೆಯನ್ನು ಈಡೇರಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ.
ಈ ಯೋಜನೆಯಲ್ಲಿ ಬಂದಾರು ಮತ್ತು ಕೊಕ್ಕಡ ಗ್ರಾಮ ಸಂಪರ್ಕಿಸುವ ಮೈಪಾಲ ಎಂಬಲ್ಲಿ ನೇತ್ರಾವತಿ ನದಿಗೆ ರೂ. 72 ಕೋಟಿ ವೆಚ್ಚದಲ್ಲಿ ಸಂಪರ್ಕ ಸೇತುವೆ
ಸಹಿತ ಕಿಂಡಿ ಅಣೆಕಟ್ಟು
ನಿರ್ಮಾಣವಾಗಲಿದೆ.
ಕೊಕ್ಕಡ ಹೋಬಳಿ ಕೇಂದ್ರ, ಕಣಿಯೂರು,ಬಂದಾರು,ಬೆಳಾಲು,ಮೊಗ್ರು ,ಇಳಂತಿಲ,ಬಾರ್ಯ,ತಣ್ಣಿರುಪಂತ ವ್ಯಾಪ್ತಿಯ ಜನರು ಕಂದಾಯ ಸೇರಿದಂತೆ ವಿವಿಧ ಇಲಾಖೆಗಳ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬೇಕಾದರೆ ಕೊಕ್ಕಡಕ್ಕೆ ಹೋಗಬೇಕು. ಮೈಪಾಲದಲ್ಲಿ ಸೇತುವೆ ಇಲ್ಲದ್ದರಿಂದ ಸುತ್ತು ಬಳಸಿ, ಮೂರ್ನಕು ಬಸ್ ಬದಲಾಯಿಸಿ ಹೋಗಬೇಕಾದ ಅನಿವಾರ್ಯತೆ ಇದೆ. ಆನೇಕ ವಷ೯ಗಳಿಂದ ಜನರು ಈ ‌ಸಮಸ್ಯೆಯನ್ನು ಎದುರಿಸುತ್ತಾ ಬರುತ್ತಿದ್ದಾರೆ. ಅಲ್ಲಿದೆ ಪುತ್ತೂರು, ಉಪ್ಪಿನಂಗಡಿ ಕಡೆಯ ಶಾಲಾ,‌ ಕಾಲೇಜು ಗಳಿಗೆ ಹೋಗುವ ವಿದ್ಯಾರ್ಥಿಗಳು, ಪುತ್ತೂರಿಗೆ ಅಗತ್ಯ ಕಾಯ೯ಗಳಿಗೆ‌ ಹೋಗಬೇಕಾದ ನಾಗರಿಕರು ನೆಲ್ಯಾಡಿ, ಅಥವಾ ಬೆಳ್ತಂಗಡಿ ಮೂಲಕ ಹೋಗಬೇಕಾಗಿದೆ. ಇದೀಗ ಮೈಪಾಲದಲ್ಲಿ ಸೇತುವೆ ಆಗುವುದರಿಂದ ಎಲ್ಲಾ ಸಮಸ್ಯೆಗಳಿಗೆ ಮುಕ್ತಿ ಸಿಗಲಿದೆ. ಶಾಸಕರ ಪ್ರಯತ್ನದಿಂದ ಮೈಪಾಲಕ್ಕೆ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಮಂಜೂರಾತಿ ಆಗಿರುವುದು ಗ್ರಾಮಸ್ಥರಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.

Related posts

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya

ಕುಣಿತಾ ಭಜನೆಯಲ್ಲಿ ಶ್ರೀ ವಿದ್ಯಾ ಸರಸ್ವತಿ ಭಜನಾ ಮಂಡಳಿ ಪಾರೆಂಕಿ ತಂಡಕ್ಕೆ ಪ್ರಥಮ ಸ್ಥಾನ

Suddi Udaya

ಜ.18: ಗೇರುಕಟ್ಟೆ ಪರಪ್ಪು ವಲಿಯುಲ್ಲಾಹಿ ಫಕೀರ್ ಮುಹಿಯುದ್ದೀನ್ ರವರ ಉರೂಸ್ ಕಾರ್ಯಕ್ರಮ

Suddi Udaya

ಕಿಲ್ಲೂರು ನಿವಾಸಿ ಗೀತಾ ಹೋಟೆಲ್ ಮಾಲಕ ಶಿವಾನಂದ ಪೂಜಾರಿ ನಿಧನ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ಪುದುವೆಟ್ಟು ವಿ. ಹಿಂ. ಪ. ಭಜರಂಗದಳ ವತಿಯಿಂದ ಶ್ರೀ ವನದುರ್ಗ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!