September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

ವೇಣೂರು: ಶ್ರೀ ಮಹಾಲೀಂಗೇಶ್ವರ ದೇವಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವವು ಫೆ 18 ರಿಂದ ಮಾ 1ರ ವರೆಗೆ ವಿವಿಧ ವೈದಿಕ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಲಿದೆ.

ಬೆಳ್ತಂಗಡಿ ತಾಲೂಕಿನ ಪ್ರಸಿದ್ಧ ಐತಿಹಾಸಿಕ ಹಿನ್ನಲೆಯುಳ್ಳ ಅಜಿಲ ಸೀಮೆಯ ಪ್ರಧಾನ ದೇವಸ್ಥಾನ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಕೆಲಸ ಕಾರ್ಯಗಳು ಅತ್ಯಂತ ಭರದಿಂದ ನಡೆಯುತ್ತಿದ್ದು ದಿನಂಪ್ರತಿ ಸಾವಿರಾರು ಜನ ಭಕ್ತರ ಶ್ರಮದಾನ, ನೂರಾರು ಕುಶಲ ಕರ್ಮಿಗಳಿಂದ ದೇವಳದ ಅಂತಿಮ ಹಂತದ ಕೆಲಸಗಳು ನಡೆಯುತ್ತಿದೆ. ‘ನಭೂತೋ ನಃ ಭವಿಷ್ಯತಿ’ ಎನ್ನುವ ರೀತಿ ನಡೆಯಲಿರುವ ಈ ಬ್ರಹ್ಮಕಲಶದಲ್ಲಿ ನಾವೆಲ್ಲರೂ ಭಾಗಿಗಳಾಗೋಣ ಎಂದು ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ, ಶಾಸಕ ಹರೀಶ್ ಪೂಂಜ ತಿಳಿಸಿದರು.

ರಸ್ತೆಗಳೆಲ್ಲ ಶೃಂಗಾರಗೊಳ್ಳುತ್ತಿದೆ.ಸಾವಿರಾರು ಮಂದಿ ಶ್ರಮದಾನ ಸೇವೆ ಮಾಡುತ್ತಿದ್ದಾರೆ. ಆಮಂತ್ರಣ ಹಂಚುವ ಕೆಲಸ ನಡೆಯುತ್ತಿದೆ.ದೇವಸ್ಥಾನದ ಚಪ್ಪರ ಕೆಲಸ ಸಂಪೂರ್ಣ ನೇರವೇರಿದೆ.

ಇಗಾಗಲೇ ದೇವಸ್ಥಾನದ ಪೂರ್ಣ ಕೆಲಸಗಳು ಸಾಗುತ್ತಿದ್ದು ಸೀಮೆಯ ದೇವರ ಬ್ರಹ್ಮಕಲಶೋತ್ಸವಕ್ಕೆ ಸಿದ್ದತೆಗಳು ನಡೆಯುತ್ತಿದೆ.

ಸಮಿತಿಯ ಸರ್ವ ಪದಾಧಿಕಾರಿಗಳು ಬ್ರಹ್ಮಕಲಶೋತ್ಸವದ ಯಶಸ್ವಿಗೆ ಶ್ರಮಿಸುತ್ತಿದ್ದಾರೆ.

Related posts

ಮಿತ್ತಬಾಗಿಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ವಿಶೇಷ ತರಗತಿ ಕಾರ್ಯಕ್ರಮದ ಉದ್ಘಾಟನೆ

Suddi Udaya

ಐದು ದಶಕಗಳ ವಿಶ್ವಾಸ, ಬೆಳ್ತಂಗಡಿ ನಗರದ ಮೊಟ್ಟ ಮೊದಲ ಚಿನ್ನಾಭರಣ ಗೀತಾ ಜ್ಯುವೆಲ್ಲರ್ಸ್‌ ನವೀಕೃತ ಮಳಿಗೆ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕು. ತುಷಾರ ಬಿ.ಎಸ್‌. ರಾಜ್ಯಕ್ಕೆ 4ನೇ ರ‍್ಯಾಂಕ್

Suddi Udaya

ಫೆ.22: ಟೀಂ ಅಭಯಹಸ್ತ ಕಾರ್ಯಕ್ರಮದ ಸಮಾಲೋಚನಾಸಭೆ: ಸಂದೀಪ್ ಸುಂದರ್ ನೀರಲ್ಕೆ

Suddi Udaya

ನಡ: ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ: ಧಾರ್ಮಿಕ ಸಭಾ ಉದ್ಘಾಟನಾ ಸಮಾರಂಭ

Suddi Udaya

ಮಿತ್ತಬಾಗಿಲು ಕೂಡಬೆಟ್ಟು ಶ್ರೀ ಸದಾಶಿವ ದೇವಸ್ಥಾನದಲ್ಲಿ ಮಹಾಶಿವರಾತ್ರಿಯ ಉತ್ಸವ: ವಿಶೇಷ ಪೂಜೆ

Suddi Udaya
error: Content is protected !!