23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

ವೇಣೂರು :ವೇಣೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು.

ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದ್ದು. ಮೆರವಣಿಗೆಯಲ್ಲಿ ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಹಾಗೂ ಸಮಿತಿಯ ಸರ್ವಸದಸ್ಯರು, ಊರ,ಪರವೂರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

Related posts

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳ ಆಯ್ಕೆ

Suddi Udaya

ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ಶಿಕ್ಷಕ-ರಕ್ಷಕ ಸಭೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ, ಧಾರ್ಮಿಕ ಸಭೆ

Suddi Udaya

ವಾತ್ಸಲ್ಯ ಮನೆ ನಿರ್ಮಾಣದ ಮೂಲಕ ಬೆಜಕ್ರೆರವರ ಬದುಕಿಗೆ ಬೆಳಕಾದ ಗ್ರಾಮಾಭಿವೃದ್ಧಿ ಯೋಜನೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ- ಆಪರೇಟಿವ್ ಸೊಸೈಟಿಗೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya
error: Content is protected !!