ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

Suddi Udaya

ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ ಅರ್ಪಿಸುವ ಕಾಶಿ ಪ್ಯಾಲೇಸ್ ಉಜಿರೆ ಪ್ರಾಯೋಜಕತ್ವ ದಲ್ಲಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾರಥೋತ್ಸವ ಪ್ರಯುಕ್ತ ಯೋಧರಿಗೊಂದು ನಮನ ಹಾಗೂ ಸಂಗೀತ ಸಂಭ್ರಮ ಫೆ.20ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.


ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್.ಬರೋಡ ತುಳು ಸಂಘ ಅಧ್ಯಕ್ಷ ಹಾಗೂ ಉದ್ಯಮಿಗಳಾದ ಶಶಿಧರ್ ಶೆಟ್ಟಿ.
ನಾವೂರು ಆರೋಗ್ಯ ಕ್ಲಿನಿಕ್ ನ ಡಾ.ಪ್ರದೀಪ್ . ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ. ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್.ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯನಂದ ಗೌಡ. ಬೆಳ್ತಂಗಡಿ ಸಹಾಯಕ ಕಾರ್ಯಪಾಲಕ ಅಭಿಯಂತರರು ನಿತಿನ್ ಕುಮಾರ್. ಉದ್ಯಮಿ ಸಂತೋಷ್ ಕುಮಾರ್ ಜೈನ್.
ಚಿಂತಕರಾದ ಪ್ರಕಾಶ್ ಮಲ್ಪೆ ಭಾರತದ ಸೈನ್ಯ ಪರಂಪರೆ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಹುತಾತ್ಮ ಯೋಧ ಭೂಸೇನೆ ಕೃಷ್ಣಪ್ಪಗೌಡ ನಡ. ಮಾಜಿ ಸೈನಿಕ ಪರಶುರಾಮ ಗೌಡ ನೇಜಿಕಾರು. ಯೋಗೀಶ್ ಗೌಡ ನಡ. ಸಮಾಜ ಸೇವಕರಾದ ರಾಮಚಂದ್ರ ಶೆಟ್ಟಿ ಉಜಿರೆ ಇವರನ್ನು ಸನ್ಮಾನಿಸ ಲಾಗುವುದು. ನಂತರ ಜಿ ಕನ್ನಡ ಹಾಗೂ ಕಲರ್ಸ್ ಕನ್ನಡದ ಹೆಸರಾಂತ ರಿಯಾಲಿಟಿ ಶೋಗಳ ಖ್ಯಾತ ಗಾಯಕರಿಂದ ಸಂಗೀತ ಸಂಭ್ರಮ ನಡೆಯಲಿದೆ.

Leave a Comment

error: Content is protected !!