25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾ ರಥೋತ್ಸವ

ನವಶಕ್ತಿ ಫ್ರೆಂಡ್ಸ್ ಬೆಳ್ತಂಗಡಿ ಅರ್ಪಿಸುವ ಕಾಶಿ ಪ್ಯಾಲೇಸ್ ಉಜಿರೆ ಪ್ರಾಯೋಜಕತ್ವ ದಲ್ಲಿ ಕುತ್ಯಾರು ಸೋಮನಾಥೇಶ್ವರ ದೇವಸ್ಥಾನದ ಮಹಾರಥೋತ್ಸವ ಪ್ರಯುಕ್ತ ಯೋಧರಿಗೊಂದು ನಮನ ಹಾಗೂ ಸಂಗೀತ ಸಂಭ್ರಮ ಫೆ.20ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ನಡೆಯಲಿದೆ.


ಸಭಾಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜಾ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್.ಬರೋಡ ತುಳು ಸಂಘ ಅಧ್ಯಕ್ಷ ಹಾಗೂ ಉದ್ಯಮಿಗಳಾದ ಶಶಿಧರ್ ಶೆಟ್ಟಿ.
ನಾವೂರು ಆರೋಗ್ಯ ಕ್ಲಿನಿಕ್ ನ ಡಾ.ಪ್ರದೀಪ್ . ಮಾಜಿ ಸೈನಿಕರ ಸಂಘದ ಅಧ್ಯಕ್ಷ ಸುನೀಲ್ ಶೆಣೈ. ಉಜಿರೆ ಲಕ್ಷ್ಮೀ ಗ್ರೂಪ್ಸ್ ಮಾಲಕರಾದ ಮೋಹನ್ ಕುಮಾರ್.ನಗರ ಪಂಚಾಯತ್ ಅಧ್ಯಕ್ಷೆ ರಜನಿ ಕುಡ್ವ ಉಪಾಧ್ಯಕ್ಷ ಜಯನಂದ ಗೌಡ. ಬೆಳ್ತಂಗಡಿ ಸಹಾಯಕ ಕಾರ್ಯಪಾಲಕ ಅಭಿಯಂತರರು ನಿತಿನ್ ಕುಮಾರ್. ಉದ್ಯಮಿ ಸಂತೋಷ್ ಕುಮಾರ್ ಜೈನ್.
ಚಿಂತಕರಾದ ಪ್ರಕಾಶ್ ಮಲ್ಪೆ ಭಾರತದ ಸೈನ್ಯ ಪರಂಪರೆ ಬಗ್ಗೆ ವಿಶೇಷ ಉಪನ್ಯಾಸವನ್ನು ನೀಡಲಿದ್ದಾರೆ. ವೇದಿಕೆಯಲ್ಲಿ ಹುತಾತ್ಮ ಯೋಧ ಭೂಸೇನೆ ಕೃಷ್ಣಪ್ಪಗೌಡ ನಡ. ಮಾಜಿ ಸೈನಿಕ ಪರಶುರಾಮ ಗೌಡ ನೇಜಿಕಾರು. ಯೋಗೀಶ್ ಗೌಡ ನಡ. ಸಮಾಜ ಸೇವಕರಾದ ರಾಮಚಂದ್ರ ಶೆಟ್ಟಿ ಉಜಿರೆ ಇವರನ್ನು ಸನ್ಮಾನಿಸ ಲಾಗುವುದು. ನಂತರ ಜಿ ಕನ್ನಡ ಹಾಗೂ ಕಲರ್ಸ್ ಕನ್ನಡದ ಹೆಸರಾಂತ ರಿಯಾಲಿಟಿ ಶೋಗಳ ಖ್ಯಾತ ಗಾಯಕರಿಂದ ಸಂಗೀತ ಸಂಭ್ರಮ ನಡೆಯಲಿದೆ.

Related posts

ಮರೋಡಿ: ಕೂಕ್ರಬೆಟ್ಟು ಶಾಲೆಗೆ “ಸರಕಾರಿ ಶಾಲೆ ಉಳಿಸಿ ಬೆಳೆಸಿ” ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ್ ಅಂಚನ್ ಭೇಟಿ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಬೃಹತ್ ಪ್ರತಿಭಟನೆಗೆ ಬೆಳ್ತಂಗಡಿ ರೈತ ಮೋರ್ಚಾ ಬೆಂಬಲ

Suddi Udaya

ಮದ್ದಡ್ಕ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಗೋಪಾಲ ಶೆಟ್ಟಿ, ಉಪಾಧ್ಯಕ್ಷರಾಗಿ ವಿವೇಕಾನಂದ ಸಾಲ್ಯಾನ್

Suddi Udaya

ಆದಿದ್ರಾವಿಡ ಸಮಾಜ ಸೇವಾ ಸಂಘ ತಾಲೂಕು ಘಟಕದ ಸಮಿತಿ ರಚನೆ

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
error: Content is protected !!