22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

ವೇಣೂರು :ವೇಣೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು.

ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದ್ದು. ಮೆರವಣಿಗೆಯಲ್ಲಿ ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಹಾಗೂ ಸಮಿತಿಯ ಸರ್ವಸದಸ್ಯರು, ಊರ,ಪರವೂರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

Related posts

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

SKSSF ಮದ್ದಡ್ಕ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಗುರುವಾಯನಕೆರೆ- ವೇಣೂರು ರಸ್ತೆಯ ಅಲ್ಲಲ್ಲಿ ಹೊಂಡಗಳು ಸೃಷ್ಟಿ, ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಕೋಟಿ-ಚೆನ್ನಯ ಕ್ರೀಡಾಕೂಟ: ಮಹಿಳೆಯರ ಹಗ್ಗ ಜಗ್ಗಾಟ ಪಂದ್ಯಾವಳಿ ಜಿಲ್ಲಾ ರಾಜ್ಯೋತ್ಸವ ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಪ್ರಥಮ ಪ್ರಶಸ್ತಿ

Suddi Udaya

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!