23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವರ ಬ್ರಹ್ಮ ಕಲಶೋತ್ಸವ

ವೇಣೂರು :ವೇಣೂರುಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವವು ಫೆ.19 ರಿಂದ ಪ್ರಾರಂಭಗೊಂಡು ಮಾ.1 ರ ವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೆರವಣಿಗಗೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರಿಂದ ಚಾಲನೆ ದೊರೆಯಿತು.

ಹಸಿರುವಾಣಿ ಹೊರೆಕಾಣಿಕೆ ದೇವರಿಗೆ ಸಮರ್ಪಣೆಯಾಗಲಿದ್ದು. ಮೆರವಣಿಗೆಯಲ್ಲಿ ಚೆಂಡೆ, ಮದ್ದಳೆ, ಕೊಂಬು, ಭಜನೆ ಹಾಗೂ ವಿವಿಧ ವೇಷ ಭೂಷಣ ಮತ್ತು ಸುಡುಮದ್ದು ಪ್ರದರ್ಶನದೊಂದಿಗೆ ಹಸಿರುವಾಣಿ ಹೊರೆಕಾಣಿಕೆಯ ಭವ್ಯ ಮೆರವಣಿಗೆಯಲ್ಲಿ ಸಾಗಿತು.

ಈ ಸಂದರ್ಭದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಹರೀಶ್ ಪೂಂಜ, ಧಾರ್ಮಿಕ ಪರಿಷತ್ ಸದಸ್ಯ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಅಳದಂಗಡಿ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ್ ಅಜಿಲ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಯನ್.ಪುರುಷೋತ್ತಮ ರಾವ್,ಬ್ರಹ್ಮಕಲಶೋತ್ಸವದ ಸಮಿತಿ ಕಾರ್ಯಾಧ್ಯಕ್ಷ ಜಯಂತ್ ಕೋಟ್ಯಾನ್, ಜೀರ್ಣೋದ್ಧಾರ ಸಮಿತಿ ಕಾರ್ಯಾಧ್ಯಕ್ಷ ಸುಂದರ ಹೆಗ್ಡೆ ಬಿಇ, ಬ್ರಹ್ಮಕಲಶೋತ್ಸವ ಸಮಿತಿ ಪ್ರಧಾನ ಕಾರ್ಯದರ್ಶಿ ಯಜ್ಞನಾರಾಯಣ ಭಟ್, ಹಾಗೂ ಸಮಿತಿಯ ಸರ್ವಸದಸ್ಯರು, ಊರ,ಪರವೂರ ಗ್ರಾಮಸ್ಥರು ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದರು.

Related posts

ತಣ್ಣೀರುಪಂಥ ವಲಯದ ಪುತ್ತಿಲ ಕಾರ್ಯಕ್ಷೇತ್ರದ ಒಕ್ಕೂಟದ ಸದಸ್ಯರಿಂದ ಶ್ರೀ ಮಹಾ ವಿಷ್ಣು ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಬಿಜೆಪಿ ಬಜಿರೆ ಗ್ರಾಮದ ಬೂತ್ ಸಂಖ್ಯೆ 140 ರ ಅಧ್ಯಕ್ಷರಾಗಿ ವಸಂತ ಶೆಟ್ಟಿ, ಕಾರ್ಯದರ್ಶಿಯಾಗಿ ಮೋನಪ್ಪ ಗೌಡ ಆಯ್ಕೆ

Suddi Udaya

ಗುರುವಾಯನಕೆರೆ: ಎಕ್ಸೆಲ್ ನಲ್ಲಿ ಪ್ರತಿಭಾವಂತರಿಗೆ ಉಚಿತ ನೀಟ್ ಲಾಂಗ್ ಟರ್ಮ್ ಕೋಚಿಂಗ್

Suddi Udaya

ಮಡಂತ್ಯಾರು: ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭ ಚರಂಡಿಗೆ ಜಾರಿದ ಕೆ ಎಸ್ ಆರ್ ಟಿ ಸಿ ಬಸ್ಸು

Suddi Udaya

ಕೊಯ್ಯೂರು ಸರ್ಕಾರಿ ಪದವಿಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ ಎಸ್.ಸಿ, ಎಸ್.ಟಿ ಫಲಾನುಭವಿಗಳಿಗೆ ನೀರಿನ ಟ್ಯಾಂಕ್ ಹಾಗೂ ವಿಕಲಚೇತನ ಫಲಾನುಭವಿಗಳಿಗೆ ಫ್ಯಾನ್ ವಿತರಣೆ

Suddi Udaya
error: Content is protected !!