July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ವೇಣೂರು: ಕ್ಷೇತ್ರದಲ್ಲಿ ಸರ್ವಜ್ಞ ವಾಣಿ ವೆಬ್ ಸೈಟ್ ಅನಾವರಣ

ಬೆಳ್ತಂಗಡಿ: ಪತ್ರಕರ್ತ ಪದ್ಮನಾಭ ವೇಣೂರು ಸ೦ಪಾದಕತ್ವದ ಕುಲಾಲ ಕು೦ಬಾರರ ಧ್ವನಿ www.sarvajnavani.com ಕನ್ನಡ ವೆಬ್‌ಸೈಟ್‌ನ್ನು ಇತಿಹಾಸ ಪ್ರಸಿದ್ಧ ಅಜಿಲ ಸೀಮೆಗೆ ಒಳಪಟ್ಟ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ. ೧೯ರಂದು ಪೂಜ್ಯ ತಿಮ್ಮಣ್ಣರಸರಾದ ಡಾ| ಪದ್ಮಪ್ರಸಾದ ಅಜಿಲರು ಹಾಗೂ ಶಾಸಕ ಹರೀಶ್ ಪೂಂಜರವರು ಪ್ರತಿಷ್ಠಿತ ಡಿ. ದೇಜರಾಜ ಅರಸು ರಾಜ್ಯಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ವೈದ್ಯ ಡಾ| ಅಣ್ಣಯ್ಯ ಕುಲಾಲ್ ಉಳ್ತೂರು ಅವರ ಉಪಸ್ಥಿತಿಯಲ್ಲಿ ಅನಾವರಣಗೊಳಿಸಿದರು.


ವೇದಿಕೆಯಲ್ಲಿ ಸಾಧ್ವಿ ಸರಸ್ವತಿ ಸ್ವಾಮೀಜಿಯವರು, ವೇಣೂರು ಗ್ರಾ.ಪಂ. ಅಧ್ಯಕ್ಷರಾದ ನೇಮಯ್ಯ ಕುಲಾಲ್, ವೇಣೂರು ಕುಂಭಶ್ರೀ ವಿದ್ಯಾಸಂಸ್ಥೆಯ ಸಂಸ್ಥಾಪಕ ಗಿರೀಶ್ ಕೆ.ಎಚ್., ವೇಣೂರು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಪಿ.ಯನ್. ಪುರುಷೋತ್ತಮ ರಾವ್ , ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಹರೀಶ್ ಮುಂಡ್ರುಪ್ಪಾಡಿ, ವೇಣೂರು ಶ್ರೀ ದಿಗಂಬರ ಜೈನ ತೀರ್ಥಕ್ಷೇತ್ರ ಸಮಿತಿಯ ಕಾರ್ಯದರ್ಶಿಗಳಾದ ವಿ. ಪ್ರವೀಣ್ ಕುಮಾರ್ ಇಂದ್ರ, ಪ್ರಸಿದ್ಧ ಉದ್ಯಮಿ ವೇಣೂರು ಧನಲಕ್ಷ್ಮೀ ಟ್ರೇಡರ್‍ಸ್‌ನ ಜಗದೀಶ್ ನಾಯಕ್, ಶ್ರೀಮತಿ ಕಮಲಾ ಬಂಗೇರ, ಶ್ರೀಮತಿ ಗೌರಮ್ಮ ನರಸಿಂಹ ಭಟ್, ಶ್ರೀಮತಿ ಚಂದ್ರ ಕುಮಾರಿ, ವಸಂತ ಸಾಲಿಯಾನ್ ಕಾಪಿನಡ್ಕ, ಬ್ರಹ್ಮ ಕಲಶ ಸಮಿತಿಯ ಯಜ್ಞನಾರಾಯಣ ಭಟ್, ವೇಣೂರಿನ ಪ್ರಸಿದ್ಧ ವೈದ್ಯರಾದ ಡಾ. ಶಾಂತಿಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.

Related posts

ಅಸಂಘಟಿತ ಕಾರ್ಮಿಕ ಘಟಕ ಬೆಳ್ತಂಗಡಿ ನಗರ ಬ್ಲಾಕ್ ಸಮಿತಿಗೆ ನೂತನ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ತೆಕ್ಕಾರು ನೇಮಕ

Suddi Udaya

ಪ್ರೊ. ಮಧೂರು ಮೋಹನ ಕಲ್ಲೂರಾಯರಿಗೆ ‘ಕರ್ನಾಟಕ ಕಲಾ ಶ್ರೀ’ ಪ್ರಶಸ್ತಿ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಎಸ್‌.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ಕಿಂಡರ್‌ಗಾರ್ಟನ್ ವಿಭಾಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪೂರ್ವ ಸಂಭ್ರಮ

Suddi Udaya

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya
error: Content is protected !!