ತಾಲೂಕು ಸುದ್ದಿ

ಬಳಂಜ:ಕಾರಣಿಕದ ಬೊಳ್ಳಜ್ಜ ಧ್ವನಿ ಸುರುಳಿ ಬಿಡುಗಡೆ

ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ‌ ಬಳಂಜ ಇದರ ನಿರ್ಮಾಣದಲ್ಲಿ ಬೊಳ್ಳಾಜೆಯಲ್ಲಿ ನೆಲೆ ನಿಂತ ಕಾರಣಿಕ ಬೊಳ್ಳಾಜ್ಜನ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮವು ಬಳಂಜ ಬಿಲ್ಲವ ಸಂಘದ ಶ್ರೀ ಗುರು ಪೂಜೋತ್ಸವ ಕಾರ್ಯಕ್ರಮದಲ್ಲಿ ನಾರಾಯಣ ಗುರು ವಿಚಾರ ವೇದಿಕೆಯ ರಾಜ್ಯಾಧ್ಯಕ್ಷ ಸತ್ಯಜಿತ್‌ ಸುರತ್ಕಲ್ ಅವರು ಬಿಡುಗಡೆಗೊಳಿಸಿ ಶುಭ ಕೋರಿದರು.

ಪಂಚ ಶ್ರೀ ಮಹಿಳಾ ಭಜನಾ ಮಂಡಳಿಯ ಸದಸ್ಯರು ಅಭಿನಯಿಸಿದರು.
ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಅಧ್ಯಕ್ಷೆ ಪುಷ್ಪಾ ಗೀರೀಶ್ ಹಾಡಿ ಅಭಿನಯಿಸಿದ್ದಾರೆ.ಸಾಹಿತ್ಯ ಹಾಗೂ ಅಭಿನಯದಲ್ಲಿ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಮಾಜಿ ಅಧ್ಯಕ್ಷೆ ವಿಶಾಲ ಜಗದೀಶ್,ನಿರ್ದೇಶನ ನಿರಂಜನ್ ಗೌಡ ಜಿ.ಕೆರೆ,ಸಹಗಾಯನ ಮತ್ತು ಅಭಿನಯ ಅಮಿತಾ ಪುರಂದರ, ಅನುಷಾ ಬೊಕ್ಕಸ, ಛಾಯಾಗ್ರಾಹಕ ಪ್ರಣವ್ ರಾವ್,
ಮಿಕ್ಸಿಂಗ್ ಸಂತೋಷ್ ಪುಚ್ಚೆರ್ ಹಾಗೂ ಪಂಚ ಶ್ರೀ ಮಹಿಳಾ ಭಜನಾ ಮಂಡಳಿ ಹಾಗೂ ಬಳಂಜ ಮಹಿಳಾ ಬಿಲ್ಲವ ವೇದಿಕೆಯ ಸಹಕಾರವಿತ್ತು.

ಕಾರ್ಯಕ್ರಮದಲ್ಲಿ ಪೋಲೀಸ್ ಅಧಿಕಾರಿ ಕುಮಾರ್ ಚಂದ್ರ,ಹಿರಿಯರಾದ ಕೆ.ವಸಂತ ಸಾಲಿಯಾನ್, ಹೆಚ್.ಧರ್ಣಪ್ಪ ಪೂಜಾರಿ, ಬಳಂಜ ಬಿಲ್ಲವ ಸಂಘದ ಅಧ್ಯಕ್ಷ ಪ್ರವೀಣ್ ಕುಮಾರ್ ಹೆಚ್.ಎಸ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಇದರ ಸಹ ಘಟಕವಾದ ರಾಜಕೇಸರಿ ಬಂಟ್ವಾಳ ತಾಲೂಕು ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya

ಬೆಳ್ತಂಗಡಿ ಚಿತ್ರಾಕೂಟ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ತಂಬಿಲ ಸೇವೆ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಪಿಂಚಣಿ ಮಸೂದೆಯನ್ನು ತಿದ್ದುಪಡಿ ಮಾಡುವಂತೆ ರಾಜ್ಯ ಸರಕಾರಿ ನಿವೃತ ನೌಕರರ ಸಂಘದಿಂದ ಉಪತಹಶೀಲ್ದಾರ್ ರವರ ಮೂಲಕ ಮನವಿ

Suddi Udaya
error: Content is protected !!