July 24, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಸಭಾಂಗಣ ನಿರ್ಮಾಣ ಕಾಮಗಾರಿಯೊಂದರ ಅಂತಿಮ ಬಿಲ್ ಪಾವತಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಲು ರೂಪಾ 10 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಗುರಿಪಲ್ಲದ ಕನ್ಯಾಡಿ ಗ್ರಾಮದ ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ದೂರುದಾರರು 2 ಸಾವಿರವನ್ನು ರೂಪಾ ಅವರಿಗೆ ಮೊದಲೇ ನೀಡಿದ್ದರು. ರೂಪಾ ಅವರು ಫೆ.19ರಂದು ಸೋಮವಾರ ದೂರುದಾರರಿಂದ 8 ಸಾವಿರ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಮಾಹಿತಿ ನೀಡಿದಾರೆ.
ಲೋಕಾಯುಕ್ತ ಪೊಲೀಸ್ ಡಿವೈಎಸ್‌ಪಿಗಳಾದ ಕಲಾವತಿ ಕೆ., ಚಲುವರಾಜು ಬಿ., ಇನ್‌ಸ್ಪೆಕ್ಟರ್ ಅಮಾನುಲ್ಲ ಎ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ವಿಶ್ವದಾಖಲೆ ಖ್ಯಾತಿಯ ಡೇವಿಡ್ ಜೈಮಿ ರವರ ಮನೆಗೆ ನೆಲ್ಯಾಡಿ ಪದವಿ ಕಾಲೇಜಿನ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಡಾ| ವೀಣಾ ಬನ್ನಂಜೆ ರವರಿಂದ ನಾಲ್ಕನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ

Suddi Udaya

ಅ.11: ಮೆಟ್ರಿಕ್ ಪೂರ್ವ ಬಾಲಕ- ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಮುಕ್ತ ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya
error: Content is protected !!