23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿ

ಸಾರ್ವಜನಿಕರಿಗೆ ಉಚಿತ ರಕ್ತದೂತ್ತಡ ಹಾಗೂ ಮಧುಮೇಹ ತಪಾಸಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ “ಶ್ರೀ ಮಂಜುನಾಥ ” ದಳದ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಧಾನದ ಜಾತ್ರಾ ಮಹೋತ್ಸವದಲ್ಲಿ ಸ್ವಯಂ ಸೇವಕರಾಗಿ ಕಾರ್ಯ ನಿರ್ವಹಿಸಿರುತ್ತಾರೆ , ಹಾಗೂ ಇಂಡಿಯನ್ ರೆಡ್ ಕ್ರಾಸ್ ನ ಜೂನಿಯರ್ ರೆಡ್ ಕ್ರಾಸ್ ವಿಧ್ಯಾರ್ಧಿಗಳು ಸಾರ್ವಜನಿಕರಿಗೆ ಉಚಿತವಾಗಿ ರಕ್ತದೂತ್ತಡ ಹಾಗೂ ಮದುಮೇಹ ತಪಾಸಣೆಯನ್ನು ಮಾಡಿದರು .ಹಾಗೇ ಶ್ರೀ ಮಂಜುನಾಥ ಭಜನಾ ತಂಡದ ವಿಧ್ಯಾರ್ಧಿಗಳು ಕುಣಿತ ಭಜನೆಯನ್ನು ನೀಡಿ ಸಾರ್ವಜನಿಕರ ಪ್ರಶಂಸೆಗೆ ಪಾತ್ರರಾದರು. ಭಾರತ್ ಸ್ಕೌಟ್ ಗೈಡ್ ನ ಕಾರ್ಯದರ್ಶಿ, ಇಂಡಿಯನ್ ಜೂನಿಯರ್ ರೆಡ್ ಕ್ರಾಸ್ ನ ಜೂನಿಯರ್ ಕೌನ್ಸಿಲರ್, ಶ್ರೀ ಮಂಜುನಾಥ ಭಜನಾ ತಂಡದ ಭಜನಾ ಸಂಯೋಜಕರಾದ ಶ್ರೀಮತಿ ಪ್ರಮೀಳಾರವರ ನೇತೃತ್ವದಲ್ಲಿ ಮುಖ್ಯ ಶಿಕ್ಷಕಿ ಶ್ರೀಮತಿ ಹೇಮಲತಾ ಎಂ ಆರ್ ಮಾರ್ಗದರ್ಶನದೊಂದಿಗೆ ಕಾರ್ಯಕ್ರಮ ಯಶಸ್ವಿಯಾಯಿತು.

Related posts

ದ.ಕ ಲೋಕಸಭಾ ಚುನಾವಣೆ: ವೀಕ್ಷಕರಾಗಿ ಹರೀಶ್ ಕುಮಾರ್ ನೇಮಕ

Suddi Udaya

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

Suddi Udaya

ಕುತ್ಲೂರು ಶಾಲೆಯಲ್ಲಿ ಮರಳಿ ಮಕ್ಕಳನ್ನು ಸೇರಿಸೋಣ ಅಭಿಯಾನ

Suddi Udaya

ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನಲ್ಲಿ ಉದ್ಯೋಗಾವಕಾಶಗಳ ಕಾರ್ಯಾಗಾರ

Suddi Udaya

ಪುತ್ತೂರು ಪೊಲೀಸರಿಂದ ಸಾವಿರಾರು ರೂ.ಮೌಲ್ಯದ ಅಕ್ರಮ ಗಾಂಜಾ ಸಾಗಾಟ ಪತ್ತೆ: 106 ಕಿ.ಗ್ರಾಂ ಗಾಂಜಾ ಸಹಿತ ಚಾಮಾ೯ಡಿಯ ಅಬ್ದುಲ್ ಸಾದಿಕ್ ಹಾಗೂ ರಫೀಕ್ ಬಂಧನ

Suddi Udaya

ವನ್ಯಜೀವಿ ವಿಭಾಗದ ಅರಣ್ಯದಲ್ಲಿ ಹತೋಟಿಗೆ ಬಂದ ಬೆಂಕಿ

Suddi Udaya
error: Content is protected !!