July 23, 2026
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಸಭಾಂಗಣ ನಿರ್ಮಾಣ ಕಾಮಗಾರಿಯೊಂದರ ಅಂತಿಮ ಬಿಲ್ ಪಾವತಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಲು ರೂಪಾ 10 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಗುರಿಪಲ್ಲದ ಕನ್ಯಾಡಿ ಗ್ರಾಮದ ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ದೂರುದಾರರು 2 ಸಾವಿರವನ್ನು ರೂಪಾ ಅವರಿಗೆ ಮೊದಲೇ ನೀಡಿದ್ದರು. ರೂಪಾ ಅವರು ಫೆ.19ರಂದು ಸೋಮವಾರ ದೂರುದಾರರಿಂದ 8 ಸಾವಿರ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಮಾಹಿತಿ ನೀಡಿದಾರೆ.
ಲೋಕಾಯುಕ್ತ ಪೊಲೀಸ್ ಡಿವೈಎಸ್‌ಪಿಗಳಾದ ಕಲಾವತಿ ಕೆ., ಚಲುವರಾಜು ಬಿ., ಇನ್‌ಸ್ಪೆಕ್ಟರ್ ಅಮಾನುಲ್ಲ ಎ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ಎಸ್.ಡಿ.ಎಂ ಪ.ಪೂರ್ವ ಕಾಲೇಜಿನಲ್ಲಿ ‘ಆರೋಹಣಂ – 2025’ ವಾರ್ಷಿಕೋತ್ಸವ ಸಮಾರಂಭ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಯುವ ಬಿಲ್ಲವ ವೇದಿಕೆಯ ನೂತನ ಸಮಿತಿ ರಚನೆ

Suddi Udaya

ಎಸ್ಐಟಿ ವಿಚಾರಣೆಗೆ ಜಯಂತ್ ಟಿ., ಗಿರೀಶ್ ಮಟ್ಟಣ್ಣವರ್, ಯ್ಯೂಟ್ಯೂಬರ್ ಗಳಾದ ಮನಾಫ್, ಅಭಿಷೇಕ್ ಹಾಜರು

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya
error: Content is protected !!