24 C
ಪುತ್ತೂರು, ಬೆಳ್ತಂಗಡಿ
April 3, 2025
ಜಿಲ್ಲಾ ಸುದ್ದಿತಾಲೂಕು ಸುದ್ದಿಸರ್ಕಾರಿ ಇಲಾಖಾ ಸುದ್ದಿ

ಲೋಕಾಯುಕ್ತ ಪೊಲೀಸರಿಂದ
ಪಂಚಾಯತ್ ರಾಜ್ ಎ.ಇ ರೂಪಾ ಬಂಧನ

ಮಂಗಳೂರು: ಪಂಚಾಯತ್ ರಾಜ್ ಎಂಜಿನಿಯರಿಂಗ್ ಇಲಾಖೆಯ ತಾಂತ್ರಿಕ ವಿಭಾಗದ ಸಹಾಯಕ ಎಂಜಿನಿಯರ್ ರೂಪಾ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರ ಕೈಗೆ ಫೆ. 21ರಂದು ಸಿಕ್ಕಿಬಿದ್ದ ಘಟನೆ ನಡೆದಿದೆ.

ಬೆಳ್ತಂಗಡಿ ತಾಲ್ಲೂಕಿನ ಪರಿಶಿಷ್ಟ ಜಾತಿಯ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿನಿಲಯದ ಸಭಾಂಗಣ ನಿರ್ಮಾಣ ಕಾಮಗಾರಿಯೊಂದರ ಅಂತಿಮ ಬಿಲ್ ಪಾವತಿಗೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಲು ರೂಪಾ 10 ಸಾವಿರ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ತಾಲ್ಲೂಕಿನ ಗುರಿಪಲ್ಲದ ಕನ್ಯಾಡಿ ಗ್ರಾಮದ ಗುತ್ತಿಗೆದಾರರೊಬ್ಬರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

‘ದೂರುದಾರರು 2 ಸಾವಿರವನ್ನು ರೂಪಾ ಅವರಿಗೆ ಮೊದಲೇ ನೀಡಿದ್ದರು. ರೂಪಾ ಅವರು ಫೆ.19ರಂದು ಸೋಮವಾರ ದೂರುದಾರರಿಂದ 8 ಸಾವಿರ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ. ಅವರನ್ನು ದಸ್ತಗಿರಿ ಮಾಡಿ ಲಂಚದ ಹಣವನ್ನು ವಶಪಡಿಸಿಕೊಂಡಿದ್ದೇವೆ’ ಎಂದು ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಸಿ.ಎ.ಸೈಮನ್ ಮಾಹಿತಿ ನೀಡಿದಾರೆ.
ಲೋಕಾಯುಕ್ತ ಪೊಲೀಸ್ ಡಿವೈಎಸ್‌ಪಿಗಳಾದ ಕಲಾವತಿ ಕೆ., ಚಲುವರಾಜು ಬಿ., ಇನ್‌ಸ್ಪೆಕ್ಟರ್ ಅಮಾನುಲ್ಲ ಎ. ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Related posts

ಪುಂಜಾಲಕಟ್ಟೆ – ಚಾಮಾ೯ಡಿ‌ ಹೆದ್ದಾರಿ ಕಾಮಗಾರಿ ಗುತ್ತಿಗೆಯಲ್ಲಿ ಬದಲಾವಣೆ: ಮೊಗ್ರೋಡಿ ಕನ್ ಸ್ಟ್ರಕ್ಷನ್ ಗೆ ನೀಡುವ ಕುರಿತು ನಿಧಾ೯ರ

Suddi Udaya

ಉಜಿರೆ ಅನುಗ್ರಹ ಪಿ.ಯು ಕಾಲೇಜಿಗೆ ನುಗ್ಗಿದ್ದ ಕಳ್ಳರು: ಸಿಸಿ ಕ್ಯಾಮೆರಾ, ಎನ್ ವಿಆರ್, ಹಾರ್ಡ್ ಡಿಸ್ಕ್ ಕಳ್ಳತನ

Suddi Udaya

ಜ.5: ನಾರಾವಿ ಶ್ರೀ ಮಹಮ್ಮಾಯಿ ದೇವಿಯ ಪುನಃ ಪ್ರತಿಷ್ಠಾ -ಸಾನಿಧ್ಯ ಕಲಶಾಭಿಷೇಕ ಮತ್ತು ಶ್ರೀ ಮಹಮ್ಮಾಯಿ ದೇವಿಯ ಗೊಂದೋಳು ಸೇವೆ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ

Suddi Udaya

ತುಮಕೂರಿನಲ್ಲಿ ಹತ್ಯೆಗೀಡಾದ ಬೆಳ್ತಂಗಡಿ ತಾಲೂಕಿನ ನಿವಾಸಿಗಳ ಮನೆಗೆ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಆಲಿ, ಮಾಜಿ ಶಾಸಕ ಮೊಹಿಯುದ್ದೀನ್ ಬಾವಾ, ಎಸ್.ಡಿ.ಪಿ.ಐ ನಿಯೋಗ ಭೇಟಿ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya

ಸಂಜೀವಿನಿ ಒಕ್ಕೂಟ: ಎಂಐಎಸ್‌ನಲ್ಲಿ ಅತ್ಯುತ್ತಮ ಸಾಧನೆ ನಿತೀಶ್ ಕುಲಾಲ್ ರಿಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ

Suddi Udaya
error: Content is protected !!