23.5 C
ಪುತ್ತೂರು, ಬೆಳ್ತಂಗಡಿ
March 7, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪದ್ಮರಾಜ್ ಆರ್. ನಾಮಪತ್ರ ಸಲ್ಲಿಕೆ

Suddi Udaya

ಚಂದ್ರಯಾನ -3 ಯಶಸ್ವಿಗಾಗಿ ಕಳೆಂಜ ಶ್ರೀ ಸದಾಶಿವೇಶ್ವರ ದೇವರ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ವಿಘ್ನೇಶ್ ಸಿಟಿ ಕಾಂಪ್ಲೆಕ್ಸ್ ನಲ್ಲಿ ಜೆಡಿಎಸ್ ಚುನಾವಣಾ ಕಚೇರಿ ಪ್ರಾರಂಭ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!