April 2, 2025
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ಸಿದ್ದೇಶ್ವರ ಶ್ರೀ ಗಳ ಅಂತ್ಯಕ್ರಿಯೆಗೆ ಶಾಂತಿಯಿಂದ ಸಹಕರಿಸಿ: ಬೊಮ್ಮಾಯಿ ಮನವಿ

Suddi Udaya

ನೀಟ್ ಪರೀಕ್ಷೆಯಲ್ಲಿ ಎಕ್ಸೆಲ್ ನ ವಿದ್ಯಾರ್ಥಿಗೆ 692 ಅಂಕ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕಕ್ಕೆರಾಜ್ಯ ಸದಸ್ಯೆಯಾಗಿ ಬರಹಗಾರ್ತಿ ಆಶಾ ಅಡೂರು, ಬೆಳ್ತಂಗಡಿ ನೇಮಕ .

Suddi Udaya

ಮದ್ದಡ್ಕ: ಬೈಕ್ ನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಕೆಎಸ್ ಆರ್ ಟಿಸಿ ಬಸ್ಸು

Suddi Udaya

ಧರ್ಮಸ್ಥಳ ಸೌಜನ್ಯಳ ಅತ್ಯಾಚಾರ ಹಾಗೂ ಕೊಲೆ ಪ್ರಕರಣ: ಜೂ.16 ರಂದು ಸಿಬಿಐ ವಿಶೇಷ ಕೋರ್ಟ್‍ನಿಂದ ಅಂತಿಮ ತೀರ್ಪು

Suddi Udaya
error: Content is protected !!