24 C
ಪುತ್ತೂರು, ಬೆಳ್ತಂಗಡಿ
June 8, 2026
ಕರಾವಳಿಜಿಲ್ಲಾ ಸುದ್ದಿ

ಕಳುವಾದ ಮೊಬೈಲ್ ಫೋನ್ ಗಳನ್ನು 24 ಗಂಟೆಯಲ್ಲಿ ಶೀಘ್ರವಾಗಿ ಪತ್ತೆ ಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಕಳುವಾದ/ಕಳೆದು ಹೋದ /ಸುಲಿಗೆಯಾದ ಮೊಬೈಲ್ ಫೋನ್ ಗಳ ದುರ್ಬಳಕೆಯನ್ನು ತಡೆಗಟ್ಟಲು ಅಂತಹ ಮೊಬೈಲ್ ಫೊನ್ ಗಳನ್ನು ಬ್ಲಾಕ್ ಮಾಡುವ ನೂತನ ವ್ಯವಸ್ಥೆ CEIR Portal ಅನ್ನು ದಕ್ಷಿಣ ಕನ್ನಡ ಜಿಲ್ಲೆ ಪೊಲೀಸ್ ಇಲಾಖೆಯಿಂದ ಪರಿಣಾಮಕಾರಿಯಾಗಿ ಜಾರಿಗೆ ತರಲಾಗಿದ್ದು, ಈ ಪೋರ್ಟಲ್ ಮೂಲಕ 24 ಗಂಟೆಯಲ್ಲಿ 7 ಕಾಣೆಯಾದ ಮೊಬೈಲ್ ಫೋನ್ ಗಳನ್ನು ಪತ್ತೆ ಹಚ್ಚಿ ಅವುಗಳಲ್ಲಿ 4 ಮೊಬೈಲ್ ಫೋನ್ ಗಳನ್ನು CEN ಅಪರಾಧ ಪೊಲೀಸ್ ಠಾಣೆ, ಉಪ್ಪಿನಂಗಡಿ, ಪುತ್ತೂರು ಟೌನ್, ಸುಳ್ಯ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ವಾರಸುದಾರರಿಗೆ ಹಸ್ತಾoತರಿಸಿರುತ್ತಾರೆ.

ಸಾರ್ವಜನಿಕರಲ್ಲಿ ಮನವಿ:
ಮೊಬೈಲ್ ಕಳೆದುಹೋದರೆ, ಕಳುವಾದರೆ, ಸುಲಿಗೆ ಯಾದರೆ ತಕ್ಷಣವೇ E-LOST ಮೂಲಕ ಅಥವಾ ಹತ್ತಿರದ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿ, ಸ್ವೀಕೃತಿ ಪಡೆದು ನಂತರ ಮಾಹಿತಿಯನ್ನು CEIR ಪೋರ್ಟಲ್ ನಮೂದಿಸುವುದು. ಇದರಿಂದ ಕಳೆದು ಹೋದ, ಕಳುವಾದ, ಸುಲಿಗೆ ಯಾದ ಮೊಬೈಲ್ ಫೋನ್ ಗಳ ದುರ್ಬಳಕೆ ತಡೆಗಟ್ಟಲು ಹಾಗೂ ಅವುಗಳನ್ನು ತಕ್ಷಣ ಪತ್ತೆ ಹಚ್ಚಲು ಅನುಕೂಲವಾಗುತ್ತದೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕೆಂದು ಕೋರಲಾಗಿದೆ.

Related posts

ರಾಜ್ಯದಲ್ಲಿ ಸ್ವಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಿಜೆಪಿಯ ಯಾವುದೇ ಶಾಸಕರು ಕಾಂಗ್ರೆಸ್‌ ಪಕ್ಷಕೆ ಹೋಗುತ್ತಿಲ್ಲ: ಈಶ್ವರಪ್ಪ

Suddi Udaya

ಸಕಲೇಶಪುರದ ಯುವಕ ನಾಪತ್ತೆ ನೇತ್ರಾವತಿ ನದಿಯಲ್ಲಿ ಯುವಕನ ಮೃತದೇಹ ಪತ್ತೆ

Suddi Udaya

6 ವರ್ಷದ ಮಗುವಿನ ಪ್ರಾಣ ಕಾಪಾಡಲು ಮಂಗಳೂರಿನಿಂದ ಚೆನ್ನೈ ಗೆ ಆ್ಯಂಬುಲೆನ್ಸ್ ನಲ್ಲಿ ನಿರಂತರ 14 ಗಂಟೆ ಪ್ರಯಾಣ, ಮಚ್ಚಿನದ ವೀರಕೇಸರಿ ಆ್ಯಂಬುಲೆನ್ಸ್ ಚಾಲಕ ದೀಕ್ಷಿತ್ ರಿಗೆ ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಭಾರತೀಯ ಜನತಾ ಪಾರ್ಟಿಯ ಮೂವರು ಪಕ್ಷದ ಸದಸ್ಯತ್ವದಿಂದ ಅಮಾನತು: ನೆರಿಯ ಗ್ರಾ.ಪಂ ಅಧ್ಯಕ್ಷೆ ಸೇರಿ ಇಬ್ಬರು ಸದಸ್ಯರಿಗೆ ಗೆಟ್ ಪಾಸ್ ನೀಡಿದ ಬಿಜೆಪಿ ಬೆಳ್ತಂಗಡಿ ಮಂಡಲ ಅಧ್ಯಕ್ಷರು

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya

ಮದ್ದಡ್ಕ ಮುಖ್ಯರಸ್ತೆಯಲ್ಲಿ ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು: ಟ್ರಾಫಿಕ್ ಜಾಮ್, ವಾಹನ ಸವಾರರ ಪರಾದಾಟ: ಬದಲಿ ರಸ್ತೆಗಳನ್ನು ಬಳಸಿಕೊಂಡು ಸಂಚಾರಿಸುವಂತೆ ಸೂಚನೆ

Suddi Udaya
error: Content is protected !!